ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.
ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.
ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.
ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.
ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.
ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…