ಸುದ್ದಿ, ಸ್ಪೂರ್ತಿ

ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

200

ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.

ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ  ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.

ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.

ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.

ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.

ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…