News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ, ಸ್ಪೂರ್ತಿ

ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

209

ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ.

ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳುಗಳು ಸೇರಿ ಎಕರೆಗೆ 40 ರಿಂದ 50 ಸಾವಿರ ಖರ್ಚುಮಾಡಿ ಬೆಳೆ ಬೆಳೆಯುತ್ತಿದ್ದ ರೈತರು ತುಂಬಾ ನಷ್ಟ ಅನುಭವಿಸುತ್ತಿದ್ದರು. ಈಗ ರೈತರ ಹೊಸ ಪ್ರಯೋಗ  ಕೃಷಿಯಲ್ಲಿ ಅಡುಗೆಎಣ್ಣೆ ಬಳಸುವ ಮೂಲಕ ಎಕರೆಗೆ ಕೇವಲ 5 ರಿಂದ 8 ಸಾವಿರ ರೂ. ಖರ್ಚು ಬರುತ್ತಿದೆ. ಇದರಿಂದ ಹೆಚ್ಚು ಲಾಭವನ್ನು ಸಹ ಗಳಿಸುತ್ತಿದ್ದಾರೆ. ಅಡುಗೆ ಎಣ್ಣೆಯನ್ನು ಕೃಷಿಯಲ್ಲಿ ಕ್ರಿಮಿಕೀಟಗಳ ನಾಶಕ್ಕೆ ಉತ್ತಮ ಪೋಷಕಾಂಶ ವನ್ನು ನೀಡುವ ಔಷಧಿಯಾಗಿ ಬಳಕೆ ಮಾಡಬಹುದು ಎಂಬುವ ಉಪಯೋಗವನ್ನು ಇಲ್ಲಿನ ರೈತರು ಕಂಡುಕೊಂಡಿದ್ದಾರೆ.

ದೇವದುರ್ಗಾ ತಾಲೂಕಿನ ಗಬ್ಬೂರು ಸೇರಿದಂತೆ ಸುತ್ತಲಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿನ ರೈತರು ಈ ಪ್ರಯೋಗದಿಂದ ಯಶಸ್ವಿಯ ನ್ನು ಕಂಡುಕೊಂಡಿದ್ದಾರೆ. ಅಡುಗೆ ಎಣ್ಣೆಗಳಾದ ಪಾಮ್, ಶೇಂಗಾ, ಕೊಬ್ಬರಿ ಹಾಗೂ ಹತ್ತಿ ಕಾಳು ಎಣ್ಣೆ, ಸೋಯಾಬಿನ್ ಎಣ್ಣೆ ಹೀಗೆ ಹಲವಾರು ಎಣ್ಣೆಗಳಿಗೆ ಕೋಳಿ ಮೊಟ್ಟೆ ಮಿಶ್ರಣ ಮಾಡಿ ವಾರಕ್ಕೊಮ್ಮೆ ಸಿಂಪಡಣೆ ಮಾಡುವುದರಿಂದ ಬೆಳೆಗಳಿಗೆ ಮುಖ್ಯವಾಗಿ ಮುರುಟು ರೋಗ, ಜೀಗಿ ರೋಗ ಸೇರಿದಂತೆ ವಿವಿಧ ರೋಗಗಳನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಬೆಳೆಗಳಿಗೆ ಅಧಿಕ ಪೋಷಕಾಂಶ ನೀಡಬಹುದು ಎನ್ನುವುದನ್ನು ರೈತರು ಕಂಡುಕೊಂಡಿದ್ದಾರೆ. ರಾಸಾಯನಿಕ ಗೊಬ್ಬರ ಹಾಗೂ ಕೀಟ ನಾಶಕ ಬಳಸಿ ಕೃಷಿ ಮಾಡುವ ಪದ್ಧತಿಯ ಖರ್ಚಿಗಿಂತ ಎಣ್ಣೆ ಬಳಸಿ ಕೃಷಿ ಮಾಡುವುದರಿಂದ ಕೇವಲ ಶೇ.10ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆ.

ಮಿಶ್ರಣ ಹೇಗೆ?
ಮೆಣಸಿನಕಾಯಿ, ಹತ್ತಿ ನಾಟಿ ಅಥವಾ ಬಿತ್ತನೆ ಮಾಡಿದ ನಂತರ ಬೆಳೆ ಬೆಳೆಯುತ್ತಿರುವಾಗ ಪ್ರತಿ ವಾರಕ್ಕೊಮ್ಮೆ ಈ ಔಷಧಿಯನ್ನು ಸಿಂಪಡಣೆ ಮಾಡಬೇಕು, ಇಲ್ಲಿ ಮುಖ್ಯವಾಗಿ ಅಡುಗೆ ಎಣ್ಣೆಯೊಂದಿಗೆ ನೀರು ಮಿಶ್ರಣ ಮಾಡಲು ಒಂದು ಮೀಡಿಯೇಟರ್ ಬೇಕು. ಅದಕ್ಕೆ ಅವರು ಕೋಳಿ ಮೊಟ್ಟೆಯನ್ನು ಮಿಶ್ರಣ ಮಾಡುತ್ತಾರೆ. ಈ ಮೊದಲು ಎಂಎಸ್ ಫೈರ್ ಎಂಬ ಔಷಧಿಯನ್ನು ಮಿಶ್ರಣಕ್ಕೆ ಬಳಸುತ್ತಿದ್ದರು. ಇದನ್ನು ಸಹ ಪ್ರತಿ 100 ಎಂ ಎಲ್ ಗೆ 40 ರೂಪಾಯಿ ಕೊಟ್ಟು ಖರೀದಿಸಬೇಕಾಗಿತ್ತು.

ಪ್ರತಿ ಎಕರೆಗೆ ಒಂದು ಕೆಜಿ ಅಡುಗೆ ಎಣ್ಣೆ ಹಾಗೂ ಅದಕ್ಕೆ ಆರು ಕೋಳಿ ಮೊಟ್ಟೆಗಳನ್ನು ಚೆನ್ನಾಗಿ ಮಿಶ್ರಣ ಮಾಡಿ 19 ಲೀಟರ್ ನಂತೆ ನೀರನ್ನ ಬೆರೆಸಿ ಆರು ಟ್ಯಾಂಕ್ ಗಳ ಔಷಧಿಯನ್ನು ಸಿಂಪಡಣೆ ಮಾಡಬೇಕು. ನಿಗಿದಿತ ಸಮಯಕ್ಕೆ ಸರಿಯಾಗಿ ಸಿಂಪಡಣೆ ಮಾಡಿದರೆ ಉತ್ತಮ ಇಳುವರಿ ಬರುತ್ತದೆ. ಪ್ರತಿ ಬಾರಿಯೂ ಔಷಧಿಗಾಗಿ ಅಡುಗೆ ಎಣ್ಣೆ ಪ್ರತಿ ಕೆಜಿಗೆ 60 ರಿಂದ 120 ರೂಪಾಯಿ, ಆರು ಮೊಟ್ಟೆಗಳಿಗೆ 40 ರೂಪಾಯಿ, ಕೂಲಿ 300 ರೂಪಾಯಿ ಹೀಗೆ ಕೇವಲ 450 ರೂಪಾಯಿಯಲ್ಲಿ ಔಷಧಿಯನ್ನು ಸಿಂಪಡಣೆ ಮಾಡಬಹುದು, ಆದೇ ರಸಾಯನಿಕ ಬಳಸಿದರೆ ಪ್ರತಿ ಲೀಟರ್ ಗೆ 1000-1500 ರೂಪಾಯಿ ಹಾಗು ರಸಗೊಬ್ಬರಕ್ಕೆ ಸಾಕಷ್ಟು ಖರ್ಚು ಮಾಡಬೇಕಾಗುತ್ತದೆ.

ಈ ಹಿಂದೆ ಇಸ್ರೇಲಿನ ಕೃಷಿ ವಿಜ್ಞಾನಿಯೊಬ್ಬರು ಪ್ರಯೋಗ ಮಾಡಿ ಯಶಸ್ವಿಯಾಗಿದ್ದರಂತೆ. ತೆಲಂಗಾಣದಲ್ಲೂ ರೈತರು ಈ ಪ್ರಯೋಗದಿಂದ ಯಶಸ್ಸು ಕಂಡಿದ್ದು ಕಳೆದ ಕೆಲ ವರ್ಷಗಳಿಂದ ಇಲ್ಲಿನ ರೈತರು ಈ ಪ್ರಯೋಗ ಮಾಡಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ರೈತರು ಸಹ ಈ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸಾಲದ ಹೊರೆಯನ್ನು ಇಳಿಸಿಕೊಳ್ಳುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ವಿಚಿತ್ರ ಆದರೂ ಸತ್ಯ

    ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…