ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ ಮಾಡುವ ಕೊಬ್ಬು ಕರಗಿಸುವ ಹಣ್ಣುಗಳ ಮಾಹಿತಿಯನ್ನ ತಿಳಿಯೋಣ.
ಬಾಳೆಹಣ್ಣು : ಬಾಳೆಹಣ್ಣು ಹಸಿವನ್ನು ಕಡಿಮೆ ಮಾಡಿ ಸಾಕಷ್ಟು ಶಕ್ತಿಯನ್ನು ನೀಡುತ್ತದೆ. ಅಲ್ಲದೆ ಬಾಳೆಹಣ್ಣಿನಲ್ಲಿ ಫೈಬರ್ ಮತ್ತು ಪೊಟ್ಯಾಶಿಯಮ್ ನಂತಹ ಖನಿಜಗಳು ಸಮೃದ್ಧವಾಗಿವೆ. ಆರೋಗ್ಯಕರವಾಗಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

ಪೇರಲೆಹಣ್ಣು : ತೂಕವನ್ನು ಕಡಿಮೆ ಮಾಡಿಕೊಳ್ಳಲು ರುಚಿಕರವಾದ ಈ ಹಣ್ಣು ಪೇರಲೆ ಕೂಡ ಸಹಾಯ ಮಾಡುತ್ತದೆ. ಇತರ ಹಣ್ಣುಗಳಿಗೆ ಹೋಲಿಸಿದರೆ ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಆದ್ದರಿಂದ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಈ ಪೇರಲೆ ಹಣ್ಣು ತೂಕವನ್ನು ನಷ್ಟ ಹಾಗೂ ಆರೋಗ್ಯಕರ ತಿಂಡಿ ಎನ್ನಲಾಗುತ್ತದೆ.

ಕಿತ್ತಳೆಹಣ್ಣು : ಆರೋಗ್ಯಕರವಾಗಿ ತೂಕವನ್ನು ನಷ್ಟಮಾಡಿಕೊಳ್ಳಲು ಬಯಸುವವರಿಗೆ ಕಿತ್ತಳೆ ಹಣ್ಣು ಸಹಾಯಕಾರಿ. ಇದರಲ್ಲಿ ಫೈಬರ್ ಸಮೃದ್ಧವಾಗಿ ಪೆಕ್ಟಿನ್, ಲಿಗ್ನಿನ್ ಮತ್ತು ಸೆಲ್ಯುಲೋಸ್ ಎಂಬ ಪದಾರ್ಥಗಳಿರುತ್ತವೆ. ಕಿತ್ತಳೆ ಹಣ್ಣು ತಿನ್ನುವುದರಿಂದ ಮಲಬದ್ಧತೆಯನ್ನು ನಿವಾರಣೆ ಮಾಡಿ ಹೊಟ್ಟೆ ಹುಬ್ಬುವುದನ್ನು ಕಡಿಮೆಮಾಡುತ್ತದೆ.

ಸ್ಟ್ರಾಬೆರಿ : ವಿಟಮಿನ್ ಸಿ, ಫೈಬರ್ , ಕ್ಯಾಲ್ಸಿಯಂ ಮತ್ತು ಪೊಟ್ಯಾಶಿಯಮ್ ನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಚಯಾಪಚಯ ಕ್ರಿಯೆಗೆ, ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ.

ಪ್ಲಮ್ : ಸಿಹಿ ರುಚಿಗೆ ಹೆಸರುವಾಸಿಯಾದ ಪ್ಲಮ್ ಪೌಷ್ಠಿಕಾಂಶದಿಂದ ತುಂಬಿರುತ್ತದೆ. ಇದರಲ್ಲಿ ಹೆಚ್ಚಿನ ಮಟ್ಟದ ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸೇರಿವೆ. ದೇಹವನ್ನು ಹೈಡ್ರೇಟ್ ಮಾಡಲು, ತೂಕ ಇಳಿಸಲು ಬಯಸುವವರು ಈ ಹಣ್ಣನ್ನು ಸೇವಿಸಬಹುದು.

ಅನಾನಸ್ : ತೂಕ ಇಳಿಸುವ ಹಣ್ಣುಗಳ ಪಟ್ಟಿಗೆ ಮತ್ತೊಂದು ಸೇರ್ಪಡೆ ಅನಾನಸ್. ಇದು ಫೈಬರ್ ನಿಂದ ಕೂಡಿದ್ದು, ಉತ್ತಮ ಜೀರ್ಣಕ್ರಿಯೆಗೆ, ಸುಲಭವಾಗಿ ವಿಷ ಹೊರಹಾಕಲು ಸಹಾಯ ಮಾಡುತ್ತದೆ. ನಿಮ್ಮ ಹಸಿವನ್ನೂ ನೀಗಿಸುತ್ತದೆ.

ಕಲ್ಲಂಗಡಿ : ಕಲ್ಲಂಗಡಿ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, 90% ನಷ್ಟು ನೀರಿನ ಅಂಶವನ್ನು ಹೊಂದಿರುತ್ತದೆ. ಇದರಲ್ಲಿ ಅಮೈನೊ ಆಸಿಡ್ ಅರ್ಜಿನೈನ್ ಎಂಬ ಏಜೆಂಟ್ ಇದ್ದು, ಪರಿಣಾಮಕಾರಿಯಾಗಿ ಕೊಬ್ಬು ಸುಡಲು ಸಹಾಯ ಮಾಡುತ್ತದೆ.

ಟೊಮೆಟೊ : ಕೊಬ್ಬನ್ನು ಕಡಿಮೆ ಮಾಡುವ ಹಣ್ಣುಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊದಲ್ಲಿ ಪ್ರಮುಖ ಅಮೈನೋ ಆಮ್ಲಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿದ್ದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಉತ್ತಮ ಪ್ರಮಾಣದ ಸಿಟ್ರಿಕ್ ಆಮ್ಲವನ್ನು ಸಹ ಹೊಂದಿದ್ದು, ಪರಿಣಾಮಕಾರಿಯಾಗಿ ಕೊಬ್ಬನ್ನು ಸುಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು