ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ ಮಾಡುವ ಕೊಬ್ಬು ಕರಗಿಸುವ ಹಣ್ಣುಗಳ ಮಾಹಿತಿಯನ್ನ ತಿಳಿಯೋಣ.
ಬಾಳೆಹಣ್ಣು : ಬಾಳೆಹಣ್ಣು ಹಸಿವನ್ನು ಕಡಿಮೆ ಮಾಡಿ ಸಾಕಷ್ಟು ಶಕ್ತಿಯನ್ನು ನೀಡುತ್ತದೆ. ಅಲ್ಲದೆ ಬಾಳೆಹಣ್ಣಿನಲ್ಲಿ ಫೈಬರ್ ಮತ್ತು ಪೊಟ್ಯಾಶಿಯಮ್ ನಂತಹ ಖನಿಜಗಳು ಸಮೃದ್ಧವಾಗಿವೆ. ಆರೋಗ್ಯಕರವಾಗಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

ಪೇರಲೆಹಣ್ಣು : ತೂಕವನ್ನು ಕಡಿಮೆ ಮಾಡಿಕೊಳ್ಳಲು ರುಚಿಕರವಾದ ಈ ಹಣ್ಣು ಪೇರಲೆ ಕೂಡ ಸಹಾಯ ಮಾಡುತ್ತದೆ. ಇತರ ಹಣ್ಣುಗಳಿಗೆ ಹೋಲಿಸಿದರೆ ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಆದ್ದರಿಂದ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಈ ಪೇರಲೆ ಹಣ್ಣು ತೂಕವನ್ನು ನಷ್ಟ ಹಾಗೂ ಆರೋಗ್ಯಕರ ತಿಂಡಿ ಎನ್ನಲಾಗುತ್ತದೆ.

ಕಿತ್ತಳೆಹಣ್ಣು : ಆರೋಗ್ಯಕರವಾಗಿ ತೂಕವನ್ನು ನಷ್ಟಮಾಡಿಕೊಳ್ಳಲು ಬಯಸುವವರಿಗೆ ಕಿತ್ತಳೆ ಹಣ್ಣು ಸಹಾಯಕಾರಿ. ಇದರಲ್ಲಿ ಫೈಬರ್ ಸಮೃದ್ಧವಾಗಿ ಪೆಕ್ಟಿನ್, ಲಿಗ್ನಿನ್ ಮತ್ತು ಸೆಲ್ಯುಲೋಸ್ ಎಂಬ ಪದಾರ್ಥಗಳಿರುತ್ತವೆ. ಕಿತ್ತಳೆ ಹಣ್ಣು ತಿನ್ನುವುದರಿಂದ ಮಲಬದ್ಧತೆಯನ್ನು ನಿವಾರಣೆ ಮಾಡಿ ಹೊಟ್ಟೆ ಹುಬ್ಬುವುದನ್ನು ಕಡಿಮೆಮಾಡುತ್ತದೆ.

ಸ್ಟ್ರಾಬೆರಿ : ವಿಟಮಿನ್ ಸಿ, ಫೈಬರ್ , ಕ್ಯಾಲ್ಸಿಯಂ ಮತ್ತು ಪೊಟ್ಯಾಶಿಯಮ್ ನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಚಯಾಪಚಯ ಕ್ರಿಯೆಗೆ, ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ.

ಪ್ಲಮ್ : ಸಿಹಿ ರುಚಿಗೆ ಹೆಸರುವಾಸಿಯಾದ ಪ್ಲಮ್ ಪೌಷ್ಠಿಕಾಂಶದಿಂದ ತುಂಬಿರುತ್ತದೆ. ಇದರಲ್ಲಿ ಹೆಚ್ಚಿನ ಮಟ್ಟದ ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸೇರಿವೆ. ದೇಹವನ್ನು ಹೈಡ್ರೇಟ್ ಮಾಡಲು, ತೂಕ ಇಳಿಸಲು ಬಯಸುವವರು ಈ ಹಣ್ಣನ್ನು ಸೇವಿಸಬಹುದು.

ಅನಾನಸ್ : ತೂಕ ಇಳಿಸುವ ಹಣ್ಣುಗಳ ಪಟ್ಟಿಗೆ ಮತ್ತೊಂದು ಸೇರ್ಪಡೆ ಅನಾನಸ್. ಇದು ಫೈಬರ್ ನಿಂದ ಕೂಡಿದ್ದು, ಉತ್ತಮ ಜೀರ್ಣಕ್ರಿಯೆಗೆ, ಸುಲಭವಾಗಿ ವಿಷ ಹೊರಹಾಕಲು ಸಹಾಯ ಮಾಡುತ್ತದೆ. ನಿಮ್ಮ ಹಸಿವನ್ನೂ ನೀಗಿಸುತ್ತದೆ.

ಕಲ್ಲಂಗಡಿ : ಕಲ್ಲಂಗಡಿ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, 90% ನಷ್ಟು ನೀರಿನ ಅಂಶವನ್ನು ಹೊಂದಿರುತ್ತದೆ. ಇದರಲ್ಲಿ ಅಮೈನೊ ಆಸಿಡ್ ಅರ್ಜಿನೈನ್ ಎಂಬ ಏಜೆಂಟ್ ಇದ್ದು, ಪರಿಣಾಮಕಾರಿಯಾಗಿ ಕೊಬ್ಬು ಸುಡಲು ಸಹಾಯ ಮಾಡುತ್ತದೆ.

ಟೊಮೆಟೊ : ಕೊಬ್ಬನ್ನು ಕಡಿಮೆ ಮಾಡುವ ಹಣ್ಣುಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊದಲ್ಲಿ ಪ್ರಮುಖ ಅಮೈನೋ ಆಮ್ಲಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿದ್ದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಉತ್ತಮ ಪ್ರಮಾಣದ ಸಿಟ್ರಿಕ್ ಆಮ್ಲವನ್ನು ಸಹ ಹೊಂದಿದ್ದು, ಪರಿಣಾಮಕಾರಿಯಾಗಿ ಕೊಬ್ಬನ್ನು ಸುಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…