News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

41

ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ.

ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ ಆರಂಭವಾಗಿ ಅಕ್ಟೋಬರ್ 4 ಕ್ಕೆ ಅಂತ್ಯಗೊಳ್ಳಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಗ್ರಾಹಕರು ಈ ಇ ಕಾಮರ್ಸ್ ಮಾರ್ಕೆಟ್‍ಪ್ಲೇಸ್‍ನಲ್ಲಿ ಶಾಪಿಂಗ್ ಮಾಡಲಿದ್ದಾರೆ.2014 ರಲ್ಲಿ ಆರಂಭವಾದ ಈ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಫ್ಲಿಪ್‍ಕಾರ್ಟ್‍ನ ಅತಿದೊಡ್ಡ ಉದ್ಯೋಗ ಸೃಷ್ಟಿ ಇದಾಗಿದೆ.

ಫ್ಲಿಪ್‍ಕಾರ್ಟ್ ವಿಶ್‍ಮಾಸ್ಟರ್ಸ್‍ನಿಂದ ವೇರ್‌ಹೌಸ್‌ಗಳಲ್ಲಿನ ಸಿಬ್ಬಂದಿಗೆ, ಮದರ್ ಹಬ್ಸ್ ಮತ್ತು ಡೆಲಿವರಿ ಹಬ್‌ವರೆಗಿನ ಪೂರ್ತಿ ಸಪ್ಲೈ ಚೇನ್‍ನಲ್ಲಿ ನೇರ ಉದ್ಯೋಗಗಳು ಇರಲಿವೆ. ಕೈನಲ್ಲಿ ಬಳಸುವ ಸಾಧನಗಳು, ಪಿಒಎಸ್ ಯಂತ್ರಗಳು, ಸ್ಕ್ಯಾನರ್‌ಗಳು, ವಿವಿಧ ಮೊಬೈಲ್ ಅಪ್ಲಿಕೇಶನ್‍ಗಳನ್ನು ಬಳಸುವ ಬಗ್ಗೆ ಸಿಬ್ಬಂದಿಗೆಲ್ಲಾ ಪೂರಕ ತರಬೇತಿಯನ್ನು ನೀಡಲಾಗಿರುತ್ತದೆ. ಇದಲ್ಲದೇ, ಪ್ರಮುಖವಾಗಿ ಗ್ರಾಹಕ ಸೇವೆ, ವಿತರಣೆ ಮತ್ತು ಅಳವಡಿಕೆ (ಇನ್‍ಸ್ಟಾಲೇಶನ್) ಕುರಿತು ತರಬೇತಿಯನ್ನು ಹೊಂದಿರುತ್ತಾರೆ.

ದೇಶಾದ್ಯಂತ ಇರುವ ಫ್ಲಿಪ್‍ಕಾರ್ಟ್‍ನ ಲಕ್ಷಾಂತರ ಮಾರಾಟ ಪಾಲುದಾರರಿಗೆ ಹಬ್ಬದ ಸಂದರ್ಭದಲ್ಲಿ ಅವರಿಗೆ ಎದುರಾಗುವ ಬೇಡಿಕೆಗಳನ್ನು ಯಾವ ರೀತಿ ಪೂರೈಸಬೇಕು ಎಂಬುದು ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಅವರಿಗೂ ಪ್ರತ್ಯೇಕ ವಿಧಾನಗಳಲ್ಲಿ ತರಬೇತಿಯನ್ನು ನೀಡಲಾಗಿದೆ. ಇವರಿಗೆ ಪ್ರಮುಖವಾಗಿ ವೇರ್‌ಹೌಸ್ ಮ್ಯಾನೇಜ್‍ಮೆಂಟ್, ಪ್ಯಾಕೇಜಿಂಗ್ ಸೇರಿದಂತೆ ಹಲವು ವಿಧದ ತರಬೇತಿಯನ್ನು ನೀಡಲಾಗಿದೆ.|

ದೇಶಾದ್ಯಂತ ಹೊಸ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಮೂಲಕ ಮಾರಾಟಗಾರರ ವ್ಯವಹಾರದ ಮಟ್ಟವನ್ನು ಹೆಚ್ಚಿಸುವುದು, ಸ್ಥಳೀಯ ಮಟ್ಟದ ಉದ್ಯಮಗಳಿಗೆ ಆದ್ಯತೆ ನೀಡುವುದು ಹಾಗೂ ಆರ್ಥಿಕತೆಯನ್ನು ಸದೃಢಗೊಳಿಸುವುದು ಫ್ಲಿಪ್‍ಕಾರ್ಟ್‍ನ ಗುರಿಯಾಗಿದೆ ಎಂದು ತಿಳಿಸಿದರು.ಇದಲ್ಲದೇ, ಬಿಗ್ ಬಿಲಿಯನ್ ಡೇಗಳ ಸಂದರ್ಭದಲ್ಲಿ ಥರ್ಡ್ ಪಾರ್ಟಿ ವೆಂಡರ್‌ಗಳಾದ ಹೌಸ್‍ಕೀಪಿಂಗ್, ಭದ್ರತೆ, ಸಾರಿಗೆಯಂತಹ ಸಂಸ್ಥೆಗಳು ತಮ್ಮ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಅವಕಾಶವಿದೆ. ಈ ಮೂಲಕ ಫ್ಲಿಪ್‍ಕಾರ್ಟ್ ಪರೋಕ್ಷ ಉದ್ಯೋಗಗಳನ್ನೂ ಸೃಷ್ಟಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….