ಸುದ್ದಿ

FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

40

ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ.

ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ ಆರಂಭವಾಗಿ ಅಕ್ಟೋಬರ್ 4 ಕ್ಕೆ ಅಂತ್ಯಗೊಳ್ಳಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಗ್ರಾಹಕರು ಈ ಇ ಕಾಮರ್ಸ್ ಮಾರ್ಕೆಟ್‍ಪ್ಲೇಸ್‍ನಲ್ಲಿ ಶಾಪಿಂಗ್ ಮಾಡಲಿದ್ದಾರೆ.2014 ರಲ್ಲಿ ಆರಂಭವಾದ ಈ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಫ್ಲಿಪ್‍ಕಾರ್ಟ್‍ನ ಅತಿದೊಡ್ಡ ಉದ್ಯೋಗ ಸೃಷ್ಟಿ ಇದಾಗಿದೆ.

ಫ್ಲಿಪ್‍ಕಾರ್ಟ್ ವಿಶ್‍ಮಾಸ್ಟರ್ಸ್‍ನಿಂದ ವೇರ್‌ಹೌಸ್‌ಗಳಲ್ಲಿನ ಸಿಬ್ಬಂದಿಗೆ, ಮದರ್ ಹಬ್ಸ್ ಮತ್ತು ಡೆಲಿವರಿ ಹಬ್‌ವರೆಗಿನ ಪೂರ್ತಿ ಸಪ್ಲೈ ಚೇನ್‍ನಲ್ಲಿ ನೇರ ಉದ್ಯೋಗಗಳು ಇರಲಿವೆ. ಕೈನಲ್ಲಿ ಬಳಸುವ ಸಾಧನಗಳು, ಪಿಒಎಸ್ ಯಂತ್ರಗಳು, ಸ್ಕ್ಯಾನರ್‌ಗಳು, ವಿವಿಧ ಮೊಬೈಲ್ ಅಪ್ಲಿಕೇಶನ್‍ಗಳನ್ನು ಬಳಸುವ ಬಗ್ಗೆ ಸಿಬ್ಬಂದಿಗೆಲ್ಲಾ ಪೂರಕ ತರಬೇತಿಯನ್ನು ನೀಡಲಾಗಿರುತ್ತದೆ. ಇದಲ್ಲದೇ, ಪ್ರಮುಖವಾಗಿ ಗ್ರಾಹಕ ಸೇವೆ, ವಿತರಣೆ ಮತ್ತು ಅಳವಡಿಕೆ (ಇನ್‍ಸ್ಟಾಲೇಶನ್) ಕುರಿತು ತರಬೇತಿಯನ್ನು ಹೊಂದಿರುತ್ತಾರೆ.

ದೇಶಾದ್ಯಂತ ಇರುವ ಫ್ಲಿಪ್‍ಕಾರ್ಟ್‍ನ ಲಕ್ಷಾಂತರ ಮಾರಾಟ ಪಾಲುದಾರರಿಗೆ ಹಬ್ಬದ ಸಂದರ್ಭದಲ್ಲಿ ಅವರಿಗೆ ಎದುರಾಗುವ ಬೇಡಿಕೆಗಳನ್ನು ಯಾವ ರೀತಿ ಪೂರೈಸಬೇಕು ಎಂಬುದು ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಅವರಿಗೂ ಪ್ರತ್ಯೇಕ ವಿಧಾನಗಳಲ್ಲಿ ತರಬೇತಿಯನ್ನು ನೀಡಲಾಗಿದೆ. ಇವರಿಗೆ ಪ್ರಮುಖವಾಗಿ ವೇರ್‌ಹೌಸ್ ಮ್ಯಾನೇಜ್‍ಮೆಂಟ್, ಪ್ಯಾಕೇಜಿಂಗ್ ಸೇರಿದಂತೆ ಹಲವು ವಿಧದ ತರಬೇತಿಯನ್ನು ನೀಡಲಾಗಿದೆ.|

ದೇಶಾದ್ಯಂತ ಹೊಸ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಮೂಲಕ ಮಾರಾಟಗಾರರ ವ್ಯವಹಾರದ ಮಟ್ಟವನ್ನು ಹೆಚ್ಚಿಸುವುದು, ಸ್ಥಳೀಯ ಮಟ್ಟದ ಉದ್ಯಮಗಳಿಗೆ ಆದ್ಯತೆ ನೀಡುವುದು ಹಾಗೂ ಆರ್ಥಿಕತೆಯನ್ನು ಸದೃಢಗೊಳಿಸುವುದು ಫ್ಲಿಪ್‍ಕಾರ್ಟ್‍ನ ಗುರಿಯಾಗಿದೆ ಎಂದು ತಿಳಿಸಿದರು.ಇದಲ್ಲದೇ, ಬಿಗ್ ಬಿಲಿಯನ್ ಡೇಗಳ ಸಂದರ್ಭದಲ್ಲಿ ಥರ್ಡ್ ಪಾರ್ಟಿ ವೆಂಡರ್‌ಗಳಾದ ಹೌಸ್‍ಕೀಪಿಂಗ್, ಭದ್ರತೆ, ಸಾರಿಗೆಯಂತಹ ಸಂಸ್ಥೆಗಳು ತಮ್ಮ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಅವಕಾಶವಿದೆ. ಈ ಮೂಲಕ ಫ್ಲಿಪ್‍ಕಾರ್ಟ್ ಪರೋಕ್ಷ ಉದ್ಯೋಗಗಳನ್ನೂ ಸೃಷ್ಟಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಲ್ಲು ಹಳದಿಗಟ್ಟಿದೆಯೇ? ಬಾಯ್ತುಂಬಾ ನಗಲೂ ನಾಚಿಕೆಯಾಗುತ್ತಿದೆಯೇ? ಹಾಗಾದ್ರೆ ಕೆಲವು ಸಿಂಪಲ್ ಮನೆ ಮದ್ದು ಮಾಡೊದು ಹೇಗೆ ಎಂದು ತಿಳಿಯಲು ಈ ಲೇಖನ ಓದಿ…

    ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…