ಸುದ್ದಿ

FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

41

ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ.

ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ ಆರಂಭವಾಗಿ ಅಕ್ಟೋಬರ್ 4 ಕ್ಕೆ ಅಂತ್ಯಗೊಳ್ಳಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಗ್ರಾಹಕರು ಈ ಇ ಕಾಮರ್ಸ್ ಮಾರ್ಕೆಟ್‍ಪ್ಲೇಸ್‍ನಲ್ಲಿ ಶಾಪಿಂಗ್ ಮಾಡಲಿದ್ದಾರೆ.2014 ರಲ್ಲಿ ಆರಂಭವಾದ ಈ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಫ್ಲಿಪ್‍ಕಾರ್ಟ್‍ನ ಅತಿದೊಡ್ಡ ಉದ್ಯೋಗ ಸೃಷ್ಟಿ ಇದಾಗಿದೆ.

ಫ್ಲಿಪ್‍ಕಾರ್ಟ್ ವಿಶ್‍ಮಾಸ್ಟರ್ಸ್‍ನಿಂದ ವೇರ್‌ಹೌಸ್‌ಗಳಲ್ಲಿನ ಸಿಬ್ಬಂದಿಗೆ, ಮದರ್ ಹಬ್ಸ್ ಮತ್ತು ಡೆಲಿವರಿ ಹಬ್‌ವರೆಗಿನ ಪೂರ್ತಿ ಸಪ್ಲೈ ಚೇನ್‍ನಲ್ಲಿ ನೇರ ಉದ್ಯೋಗಗಳು ಇರಲಿವೆ. ಕೈನಲ್ಲಿ ಬಳಸುವ ಸಾಧನಗಳು, ಪಿಒಎಸ್ ಯಂತ್ರಗಳು, ಸ್ಕ್ಯಾನರ್‌ಗಳು, ವಿವಿಧ ಮೊಬೈಲ್ ಅಪ್ಲಿಕೇಶನ್‍ಗಳನ್ನು ಬಳಸುವ ಬಗ್ಗೆ ಸಿಬ್ಬಂದಿಗೆಲ್ಲಾ ಪೂರಕ ತರಬೇತಿಯನ್ನು ನೀಡಲಾಗಿರುತ್ತದೆ. ಇದಲ್ಲದೇ, ಪ್ರಮುಖವಾಗಿ ಗ್ರಾಹಕ ಸೇವೆ, ವಿತರಣೆ ಮತ್ತು ಅಳವಡಿಕೆ (ಇನ್‍ಸ್ಟಾಲೇಶನ್) ಕುರಿತು ತರಬೇತಿಯನ್ನು ಹೊಂದಿರುತ್ತಾರೆ.

ದೇಶಾದ್ಯಂತ ಇರುವ ಫ್ಲಿಪ್‍ಕಾರ್ಟ್‍ನ ಲಕ್ಷಾಂತರ ಮಾರಾಟ ಪಾಲುದಾರರಿಗೆ ಹಬ್ಬದ ಸಂದರ್ಭದಲ್ಲಿ ಅವರಿಗೆ ಎದುರಾಗುವ ಬೇಡಿಕೆಗಳನ್ನು ಯಾವ ರೀತಿ ಪೂರೈಸಬೇಕು ಎಂಬುದು ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಅವರಿಗೂ ಪ್ರತ್ಯೇಕ ವಿಧಾನಗಳಲ್ಲಿ ತರಬೇತಿಯನ್ನು ನೀಡಲಾಗಿದೆ. ಇವರಿಗೆ ಪ್ರಮುಖವಾಗಿ ವೇರ್‌ಹೌಸ್ ಮ್ಯಾನೇಜ್‍ಮೆಂಟ್, ಪ್ಯಾಕೇಜಿಂಗ್ ಸೇರಿದಂತೆ ಹಲವು ವಿಧದ ತರಬೇತಿಯನ್ನು ನೀಡಲಾಗಿದೆ.|

ದೇಶಾದ್ಯಂತ ಹೊಸ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಮೂಲಕ ಮಾರಾಟಗಾರರ ವ್ಯವಹಾರದ ಮಟ್ಟವನ್ನು ಹೆಚ್ಚಿಸುವುದು, ಸ್ಥಳೀಯ ಮಟ್ಟದ ಉದ್ಯಮಗಳಿಗೆ ಆದ್ಯತೆ ನೀಡುವುದು ಹಾಗೂ ಆರ್ಥಿಕತೆಯನ್ನು ಸದೃಢಗೊಳಿಸುವುದು ಫ್ಲಿಪ್‍ಕಾರ್ಟ್‍ನ ಗುರಿಯಾಗಿದೆ ಎಂದು ತಿಳಿಸಿದರು.ಇದಲ್ಲದೇ, ಬಿಗ್ ಬಿಲಿಯನ್ ಡೇಗಳ ಸಂದರ್ಭದಲ್ಲಿ ಥರ್ಡ್ ಪಾರ್ಟಿ ವೆಂಡರ್‌ಗಳಾದ ಹೌಸ್‍ಕೀಪಿಂಗ್, ಭದ್ರತೆ, ಸಾರಿಗೆಯಂತಹ ಸಂಸ್ಥೆಗಳು ತಮ್ಮ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಅವಕಾಶವಿದೆ. ಈ ಮೂಲಕ ಫ್ಲಿಪ್‍ಕಾರ್ಟ್ ಪರೋಕ್ಷ ಉದ್ಯೋಗಗಳನ್ನೂ ಸೃಷ್ಟಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ರೆಸಿಪಿ

    ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

    ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ –…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…