News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

48

ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ.

ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ ಆರಂಭವಾಗಿ ಅಕ್ಟೋಬರ್ 4 ಕ್ಕೆ ಅಂತ್ಯಗೊಳ್ಳಲಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಗ್ರಾಹಕರು ಈ ಇ ಕಾಮರ್ಸ್ ಮಾರ್ಕೆಟ್‍ಪ್ಲೇಸ್‍ನಲ್ಲಿ ಶಾಪಿಂಗ್ ಮಾಡಲಿದ್ದಾರೆ.2014 ರಲ್ಲಿ ಆರಂಭವಾದ ಈ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಫ್ಲಿಪ್‍ಕಾರ್ಟ್‍ನ ಅತಿದೊಡ್ಡ ಉದ್ಯೋಗ ಸೃಷ್ಟಿ ಇದಾಗಿದೆ.

ಫ್ಲಿಪ್‍ಕಾರ್ಟ್ ವಿಶ್‍ಮಾಸ್ಟರ್ಸ್‍ನಿಂದ ವೇರ್‌ಹೌಸ್‌ಗಳಲ್ಲಿನ ಸಿಬ್ಬಂದಿಗೆ, ಮದರ್ ಹಬ್ಸ್ ಮತ್ತು ಡೆಲಿವರಿ ಹಬ್‌ವರೆಗಿನ ಪೂರ್ತಿ ಸಪ್ಲೈ ಚೇನ್‍ನಲ್ಲಿ ನೇರ ಉದ್ಯೋಗಗಳು ಇರಲಿವೆ. ಕೈನಲ್ಲಿ ಬಳಸುವ ಸಾಧನಗಳು, ಪಿಒಎಸ್ ಯಂತ್ರಗಳು, ಸ್ಕ್ಯಾನರ್‌ಗಳು, ವಿವಿಧ ಮೊಬೈಲ್ ಅಪ್ಲಿಕೇಶನ್‍ಗಳನ್ನು ಬಳಸುವ ಬಗ್ಗೆ ಸಿಬ್ಬಂದಿಗೆಲ್ಲಾ ಪೂರಕ ತರಬೇತಿಯನ್ನು ನೀಡಲಾಗಿರುತ್ತದೆ. ಇದಲ್ಲದೇ, ಪ್ರಮುಖವಾಗಿ ಗ್ರಾಹಕ ಸೇವೆ, ವಿತರಣೆ ಮತ್ತು ಅಳವಡಿಕೆ (ಇನ್‍ಸ್ಟಾಲೇಶನ್) ಕುರಿತು ತರಬೇತಿಯನ್ನು ಹೊಂದಿರುತ್ತಾರೆ.

ದೇಶಾದ್ಯಂತ ಇರುವ ಫ್ಲಿಪ್‍ಕಾರ್ಟ್‍ನ ಲಕ್ಷಾಂತರ ಮಾರಾಟ ಪಾಲುದಾರರಿಗೆ ಹಬ್ಬದ ಸಂದರ್ಭದಲ್ಲಿ ಅವರಿಗೆ ಎದುರಾಗುವ ಬೇಡಿಕೆಗಳನ್ನು ಯಾವ ರೀತಿ ಪೂರೈಸಬೇಕು ಎಂಬುದು ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಅವರಿಗೂ ಪ್ರತ್ಯೇಕ ವಿಧಾನಗಳಲ್ಲಿ ತರಬೇತಿಯನ್ನು ನೀಡಲಾಗಿದೆ. ಇವರಿಗೆ ಪ್ರಮುಖವಾಗಿ ವೇರ್‌ಹೌಸ್ ಮ್ಯಾನೇಜ್‍ಮೆಂಟ್, ಪ್ಯಾಕೇಜಿಂಗ್ ಸೇರಿದಂತೆ ಹಲವು ವಿಧದ ತರಬೇತಿಯನ್ನು ನೀಡಲಾಗಿದೆ.|

ದೇಶಾದ್ಯಂತ ಹೊಸ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಮೂಲಕ ಮಾರಾಟಗಾರರ ವ್ಯವಹಾರದ ಮಟ್ಟವನ್ನು ಹೆಚ್ಚಿಸುವುದು, ಸ್ಥಳೀಯ ಮಟ್ಟದ ಉದ್ಯಮಗಳಿಗೆ ಆದ್ಯತೆ ನೀಡುವುದು ಹಾಗೂ ಆರ್ಥಿಕತೆಯನ್ನು ಸದೃಢಗೊಳಿಸುವುದು ಫ್ಲಿಪ್‍ಕಾರ್ಟ್‍ನ ಗುರಿಯಾಗಿದೆ ಎಂದು ತಿಳಿಸಿದರು.ಇದಲ್ಲದೇ, ಬಿಗ್ ಬಿಲಿಯನ್ ಡೇಗಳ ಸಂದರ್ಭದಲ್ಲಿ ಥರ್ಡ್ ಪಾರ್ಟಿ ವೆಂಡರ್‌ಗಳಾದ ಹೌಸ್‍ಕೀಪಿಂಗ್, ಭದ್ರತೆ, ಸಾರಿಗೆಯಂತಹ ಸಂಸ್ಥೆಗಳು ತಮ್ಮ ವ್ಯವಹಾರವನ್ನು ವೃದ್ಧಿಸಿಕೊಳ್ಳಲು ಅವಕಾಶವಿದೆ. ಈ ಮೂಲಕ ಫ್ಲಿಪ್‍ಕಾರ್ಟ್ ಪರೋಕ್ಷ ಉದ್ಯೋಗಗಳನ್ನೂ ಸೃಷ್ಟಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.

  • ಜ್ಯೋತಿಷ್ಯ

    ತಾಯಿ ಚಾಮುಂಡೇಶ್ವರಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…