ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.

ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.

ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
KOLAR NEWS PAPER 27-12-2022
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…