News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

200

ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.

ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.

ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.

  • ಜ್ಯೋತಿಷ್ಯ

    ಅರ್ಧನಾರೀಶ್ವರನನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯದಲ್ಲಿ ಏನಿದೆ ಎಂದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…