ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.
ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.
30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.
ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.
ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…