ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.

ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.

30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.

ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.
ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…