ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು ವ್ಯವಸಾಯ ಮಾಡಿ ಇವತ್ತು ವಿದೇಶಿಗರಿಗೆ ಸೆಡ್ಡು ಹೊಡೆಯುತ್ತಿದ್ದಾರೆ ಮತ್ತು ಕನ್ನಡದ ಮಣ್ಣಲ್ಲಿ ಚಿನ್ನವನ್ನ ಬೆಳೆಯಲು ಹೊರಟಿದ್ದಾರೆ ಈ ವ್ಯಕ್ತಿ.

ಇವರು ಮಾಡಿದ ಒಂದೇ ಒಂದು ಉಪಾಯ ಇಂದು ಅವರ ಜೀವನವನ್ನೇ ಬದಲಾಯಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ, ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿ ಹಳ್ಳಿಯ 36 ವರ್ಷದ ಗಿರೀಶ್ ಅವರು ಬಿ.ಇ ಮಾಡಿ ತಿಂಗಳಿಗೆ ನಾಲ್ಕು ಲಕ್ಷ ರೂಪಾಯಿಯ ಸಂಬಳವನ್ನ ಪಡೆಯುತ್ತ ಜರ್ಮನಿಯಲ್ಲಿ ಒಳ್ಳೆಯ ಉದ್ಯೋಗ ಮಾಡುತ್ತಿದ್ದರು, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಅವರ ಮನಸ್ಸು ಯಾವಾಗಲು ಊರಿನ ಕಡೆ ಇರುತ್ತಿತ್ತು ಮತ್ತು ಊರಿನಲ್ಲಿ ಇರುವ ತಂದೆ ತಾಯಿಯನ್ನ ಸೆಳೆಯುತ್ತಿತ್ತು ಗಿರೀಶ್ ಮನಸ್ಸು.
ಕೊನೆಗೆ ಒಂದು ದಿಟ್ಟ ನಿರ್ಧಾರವನ್ನ ಮಾಡಿದ ಗಿರೀಶ್ ತಾನು ಮಾಡುತ್ತಿದ್ದ ಕೆಲಸಕ್ಕೆ ರಾಜೀನಾಮೆಯನ್ನ ಕೊಟ್ಟು ಊರಿನಲ್ಲಿ ತನಗೆ ಇದ್ದ ಜಮೀನಿನಲ್ಲಿ ವ್ಯವಸಾಯ ಮಾಡಲು ಮುಂದಾದರು ಗಿರೀಶ್ ಅವರು. ಜಮೀನಿನಲ್ಲಿ ನೀರಿಗಾಗಿ ಸುಮಾರು 40 ಬೋರ್ ವೆಲ್ ಗಳನ್ನ ಹಾಕಿಸಿದರು ಗಿರೀಶ್, ಆದರೆ ನೀರು ಮಾತ್ರ ಸಿಗಲೇ ಇಲ್ಲ ಮತ್ತು ಈ ಸಮಯದಲ್ಲಿ ಗಿರೀಶ್ ಗೆ ಒಂದು ಅದ್ಭುತವಾದ ಆಲೋಚನೆ ಬರುತ್ತದೆ ಮತ್ತು ಅವರಿಗೆ ಬಂದ ಆಲೋಚನೆ ತುಂಬಾ ಸರಳವಾದದ್ದು ಆದರೆ ಅದನ್ನ ಕಾರ್ಯರೂಪಕ್ಕೆ ತರುವುದು ದೊಡ್ಡ ಸವಾಲು ಆಗಿತ್ತು.

ಹೌದು ಗಿರೀಶ್ ಅವರಿಗೆ ಬಂದ ಆಲೋಚನೆ ಏನು ಅಂದರೆ ಮಳೆ ನೀರನ ಸಂಗ್ರಹ ಮಾಡಿ ಅದರಲ್ಲಿ ವ್ಯವಸಾಯ ಮಾಡುವುದು, ಆದರೆ ಅದೂ ಹೇಗೆ ಅನ್ನುವುದು ಗಿರೀಶ್ ಅವರ ಮುಂದೆ ಇದ್ದ ದೊಡ್ಡ ಸವಾಲು ಆಗಿತ್ತು. ತನಗೆ ಇದ್ದ ಹತ್ತು ಎಕರೆ ಜಮೀನಿನಲ್ಲಿ ಗುಲಾಬಿ ಬೆಳೆಯುವ ನಿರ್ಧಾರ ಮಾಡಿದ ಗಿರೀಶ್ ಅವರು ಒಂದು ಎಕರೆ ವಿಸ್ತಾರದ ಏಳು ಪಾಲಿ ಹೌಸ್ ನಿರ್ಮಾಣ ಮಾಡಿ ಅದರ ಒಳಗೆ ಗುಲಾಬಿ ಬೆಳೆಯಲು ನಿರ್ಧಾರ ಮಾಡಿದರು. ಇನ್ನು ಮಳೆಗಾಲದ ಸಮಯದಲ್ಲಿ ಆ ಪಾಲಿ ಹೌಸ್ ಮನೆಯ ಮೇಲೆ ಬೀಳುವ ಮಳೆಯ ನೀರನ್ನ ಪೈಪ್ ಗಳ ಮೂಲಕ ಹರಿಸಿ ವ್ಯವಸ್ಥಿತವಾಗಿ ನಿರ್ಮಾಣ ಮಾಡಿರುವ ಒಂದು ಕೆರೆಯಲ್ಲಿ ಶೇಖರಣೆ ಮಾಡುವುದು ಮತ್ತು ಆ ಶೇಖರಣೆ ಆದ ನೀರನ್ನ ವರ್ಷಪೂರ್ತಿ ಬಳಸಿಕೊಳ್ಳುವುದು ಗಿರೀಶ್ ಅವರ ಉಪಾಯ ಆಗಿತ್ತು. ಇನ್ನು ಹೀಗೆ ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿದ ಗಿರೀಶ್ ಅವರು ಪಾಲಿ ಹೌಸ್ ಮೇಲೆ ಬೀಳುವ ಮಳೆಯ ನೀರನ್ನ ಬಳಸಿಕೊಂಡು ಗುಲಾಬಿಯನ್ನ ಬೆಳೆಯುತ್ತಿದ್ದಾರೆ.

ಇನ್ನು ಮಳೆಗಾಲದಲ್ಲಿ 1.30 ಲಕ್ಷ ಲೀಟರ್ ಮಳೆಯ ನೀರನ್ನ ಶೇಖರಣೆ ಮಾಡುತ್ತಿರುವ ಗಿರೀಶ್ ಅವರು ಆ ನೀರನ್ನ ಬಳಸಿಕೊಂಡು ಸುಂದರವಾದ ಗುಲಾಬಿ ಹೂವುಗಳನ್ನ ಬೆಳೆಯುತ್ತಿದ್ದಾರೆ. ತಿಂಗಳಿಗೆ ಸುಮಾರು 15000 ಗುಲಾಬಿ ಹೂವುಗಳನ್ನ ಬೆಳೆಯುತ್ತಿರುವ ಗಿರೀಶ್ ಅವರು ಅವುಗಳನ್ನ ಭಾರತ ಮತ್ತು ವಿದೇಶದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇನ್ನು ಎಮ್ ಟೆಕ್ ಓದಿರುವ ಗಿರೀಶ್ ಅವರ ಪತ್ನಿ ಕೂಡ ಗಂಡನ ಈ ಕೆಲಸಕ್ಕೆ ಕೈ ಜೋಡಿಸಿದ್ದಾರೆ, ಗಿರೀಶ್ ಅವರ ಈ ಉಪಾಯ ಹಲವು ರೈತರಿಗೆ ಸ್ಫೂರ್ತಿ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…