ಸುದ್ದಿ, ಸ್ಪೂರ್ತಿ

ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

50

ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು ವ್ಯವಸಾಯ ಮಾಡಿ ಇವತ್ತು ವಿದೇಶಿಗರಿಗೆ ಸೆಡ್ಡು ಹೊಡೆಯುತ್ತಿದ್ದಾರೆ ಮತ್ತು ಕನ್ನಡದ ಮಣ್ಣಲ್ಲಿ ಚಿನ್ನವನ್ನ ಬೆಳೆಯಲು ಹೊರಟಿದ್ದಾರೆ ಈ ವ್ಯಕ್ತಿ.

ಇವರು ಮಾಡಿದ ಒಂದೇ ಒಂದು ಉಪಾಯ ಇಂದು ಅವರ ಜೀವನವನ್ನೇ ಬದಲಾಯಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ, ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿ ಹಳ್ಳಿಯ 36 ವರ್ಷದ ಗಿರೀಶ್ ಅವರು ಬಿ.ಇ ಮಾಡಿ ತಿಂಗಳಿಗೆ ನಾಲ್ಕು ಲಕ್ಷ ರೂಪಾಯಿಯ ಸಂಬಳವನ್ನ ಪಡೆಯುತ್ತ ಜರ್ಮನಿಯಲ್ಲಿ ಒಳ್ಳೆಯ ಉದ್ಯೋಗ ಮಾಡುತ್ತಿದ್ದರು, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಅವರ ಮನಸ್ಸು ಯಾವಾಗಲು ಊರಿನ ಕಡೆ ಇರುತ್ತಿತ್ತು ಮತ್ತು ಊರಿನಲ್ಲಿ ಇರುವ ತಂದೆ ತಾಯಿಯನ್ನ ಸೆಳೆಯುತ್ತಿತ್ತು ಗಿರೀಶ್ ಮನಸ್ಸು.

ಕೊನೆಗೆ ಒಂದು ದಿಟ್ಟ ನಿರ್ಧಾರವನ್ನ ಮಾಡಿದ ಗಿರೀಶ್ ತಾನು ಮಾಡುತ್ತಿದ್ದ ಕೆಲಸಕ್ಕೆ ರಾಜೀನಾಮೆಯನ್ನ ಕೊಟ್ಟು ಊರಿನಲ್ಲಿ ತನಗೆ ಇದ್ದ ಜಮೀನಿನಲ್ಲಿ ವ್ಯವಸಾಯ ಮಾಡಲು ಮುಂದಾದರು ಗಿರೀಶ್ ಅವರು. ಜಮೀನಿನಲ್ಲಿ ನೀರಿಗಾಗಿ ಸುಮಾರು 40 ಬೋರ್ ವೆಲ್ ಗಳನ್ನ ಹಾಕಿಸಿದರು ಗಿರೀಶ್, ಆದರೆ ನೀರು ಮಾತ್ರ ಸಿಗಲೇ ಇಲ್ಲ ಮತ್ತು ಈ ಸಮಯದಲ್ಲಿ ಗಿರೀಶ್ ಗೆ ಒಂದು ಅದ್ಭುತವಾದ ಆಲೋಚನೆ ಬರುತ್ತದೆ ಮತ್ತು ಅವರಿಗೆ ಬಂದ ಆಲೋಚನೆ ತುಂಬಾ ಸರಳವಾದದ್ದು ಆದರೆ ಅದನ್ನ ಕಾರ್ಯರೂಪಕ್ಕೆ ತರುವುದು ದೊಡ್ಡ ಸವಾಲು ಆಗಿತ್ತು.

ಹೌದು ಗಿರೀಶ್ ಅವರಿಗೆ ಬಂದ ಆಲೋಚನೆ ಏನು ಅಂದರೆ ಮಳೆ ನೀರನ ಸಂಗ್ರಹ ಮಾಡಿ ಅದರಲ್ಲಿ ವ್ಯವಸಾಯ ಮಾಡುವುದು, ಆದರೆ ಅದೂ ಹೇಗೆ ಅನ್ನುವುದು ಗಿರೀಶ್ ಅವರ ಮುಂದೆ ಇದ್ದ ದೊಡ್ಡ ಸವಾಲು ಆಗಿತ್ತು. ತನಗೆ ಇದ್ದ ಹತ್ತು ಎಕರೆ ಜಮೀನಿನಲ್ಲಿ ಗುಲಾಬಿ ಬೆಳೆಯುವ ನಿರ್ಧಾರ ಮಾಡಿದ ಗಿರೀಶ್ ಅವರು ಒಂದು ಎಕರೆ ವಿಸ್ತಾರದ ಏಳು ಪಾಲಿ ಹೌಸ್ ನಿರ್ಮಾಣ ಮಾಡಿ ಅದರ ಒಳಗೆ ಗುಲಾಬಿ ಬೆಳೆಯಲು ನಿರ್ಧಾರ ಮಾಡಿದರು. ಇನ್ನು ಮಳೆಗಾಲದ ಸಮಯದಲ್ಲಿ ಆ ಪಾಲಿ ಹೌಸ್ ಮನೆಯ ಮೇಲೆ ಬೀಳುವ ಮಳೆಯ ನೀರನ್ನ ಪೈಪ್ ಗಳ ಮೂಲಕ ಹರಿಸಿ ವ್ಯವಸ್ಥಿತವಾಗಿ ನಿರ್ಮಾಣ ಮಾಡಿರುವ ಒಂದು ಕೆರೆಯಲ್ಲಿ ಶೇಖರಣೆ ಮಾಡುವುದು ಮತ್ತು ಆ ಶೇಖರಣೆ ಆದ ನೀರನ್ನ ವರ್ಷಪೂರ್ತಿ ಬಳಸಿಕೊಳ್ಳುವುದು ಗಿರೀಶ್ ಅವರ ಉಪಾಯ ಆಗಿತ್ತು. ಇನ್ನು ಹೀಗೆ ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿದ ಗಿರೀಶ್ ಅವರು ಪಾಲಿ ಹೌಸ್ ಮೇಲೆ ಬೀಳುವ ಮಳೆಯ ನೀರನ್ನ ಬಳಸಿಕೊಂಡು ಗುಲಾಬಿಯನ್ನ ಬೆಳೆಯುತ್ತಿದ್ದಾರೆ.

ಇನ್ನು ಮಳೆಗಾಲದಲ್ಲಿ 1.30 ಲಕ್ಷ ಲೀಟರ್ ಮಳೆಯ ನೀರನ್ನ ಶೇಖರಣೆ ಮಾಡುತ್ತಿರುವ ಗಿರೀಶ್ ಅವರು ಆ ನೀರನ್ನ ಬಳಸಿಕೊಂಡು ಸುಂದರವಾದ ಗುಲಾಬಿ ಹೂವುಗಳನ್ನ ಬೆಳೆಯುತ್ತಿದ್ದಾರೆ. ತಿಂಗಳಿಗೆ ಸುಮಾರು 15000 ಗುಲಾಬಿ ಹೂವುಗಳನ್ನ ಬೆಳೆಯುತ್ತಿರುವ ಗಿರೀಶ್ ಅವರು ಅವುಗಳನ್ನ ಭಾರತ ಮತ್ತು ವಿದೇಶದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇನ್ನು ಎಮ್ ಟೆಕ್ ಓದಿರುವ ಗಿರೀಶ್ ಅವರ ಪತ್ನಿ ಕೂಡ ಗಂಡನ ಈ ಕೆಲಸಕ್ಕೆ ಕೈ ಜೋಡಿಸಿದ್ದಾರೆ, ಗಿರೀಶ್ ಅವರ ಈ ಉಪಾಯ ಹಲವು ರೈತರಿಗೆ ಸ್ಫೂರ್ತಿ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.