News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಸುದ್ದಿ, ಸ್ಪೂರ್ತಿ

ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

50

ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು ವ್ಯವಸಾಯ ಮಾಡಿ ಇವತ್ತು ವಿದೇಶಿಗರಿಗೆ ಸೆಡ್ಡು ಹೊಡೆಯುತ್ತಿದ್ದಾರೆ ಮತ್ತು ಕನ್ನಡದ ಮಣ್ಣಲ್ಲಿ ಚಿನ್ನವನ್ನ ಬೆಳೆಯಲು ಹೊರಟಿದ್ದಾರೆ ಈ ವ್ಯಕ್ತಿ.

ಇವರು ಮಾಡಿದ ಒಂದೇ ಒಂದು ಉಪಾಯ ಇಂದು ಅವರ ಜೀವನವನ್ನೇ ಬದಲಾಯಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ, ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿ ಹಳ್ಳಿಯ 36 ವರ್ಷದ ಗಿರೀಶ್ ಅವರು ಬಿ.ಇ ಮಾಡಿ ತಿಂಗಳಿಗೆ ನಾಲ್ಕು ಲಕ್ಷ ರೂಪಾಯಿಯ ಸಂಬಳವನ್ನ ಪಡೆಯುತ್ತ ಜರ್ಮನಿಯಲ್ಲಿ ಒಳ್ಳೆಯ ಉದ್ಯೋಗ ಮಾಡುತ್ತಿದ್ದರು, ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಅವರ ಮನಸ್ಸು ಯಾವಾಗಲು ಊರಿನ ಕಡೆ ಇರುತ್ತಿತ್ತು ಮತ್ತು ಊರಿನಲ್ಲಿ ಇರುವ ತಂದೆ ತಾಯಿಯನ್ನ ಸೆಳೆಯುತ್ತಿತ್ತು ಗಿರೀಶ್ ಮನಸ್ಸು.

ಕೊನೆಗೆ ಒಂದು ದಿಟ್ಟ ನಿರ್ಧಾರವನ್ನ ಮಾಡಿದ ಗಿರೀಶ್ ತಾನು ಮಾಡುತ್ತಿದ್ದ ಕೆಲಸಕ್ಕೆ ರಾಜೀನಾಮೆಯನ್ನ ಕೊಟ್ಟು ಊರಿನಲ್ಲಿ ತನಗೆ ಇದ್ದ ಜಮೀನಿನಲ್ಲಿ ವ್ಯವಸಾಯ ಮಾಡಲು ಮುಂದಾದರು ಗಿರೀಶ್ ಅವರು. ಜಮೀನಿನಲ್ಲಿ ನೀರಿಗಾಗಿ ಸುಮಾರು 40 ಬೋರ್ ವೆಲ್ ಗಳನ್ನ ಹಾಕಿಸಿದರು ಗಿರೀಶ್, ಆದರೆ ನೀರು ಮಾತ್ರ ಸಿಗಲೇ ಇಲ್ಲ ಮತ್ತು ಈ ಸಮಯದಲ್ಲಿ ಗಿರೀಶ್ ಗೆ ಒಂದು ಅದ್ಭುತವಾದ ಆಲೋಚನೆ ಬರುತ್ತದೆ ಮತ್ತು ಅವರಿಗೆ ಬಂದ ಆಲೋಚನೆ ತುಂಬಾ ಸರಳವಾದದ್ದು ಆದರೆ ಅದನ್ನ ಕಾರ್ಯರೂಪಕ್ಕೆ ತರುವುದು ದೊಡ್ಡ ಸವಾಲು ಆಗಿತ್ತು.

ಹೌದು ಗಿರೀಶ್ ಅವರಿಗೆ ಬಂದ ಆಲೋಚನೆ ಏನು ಅಂದರೆ ಮಳೆ ನೀರನ ಸಂಗ್ರಹ ಮಾಡಿ ಅದರಲ್ಲಿ ವ್ಯವಸಾಯ ಮಾಡುವುದು, ಆದರೆ ಅದೂ ಹೇಗೆ ಅನ್ನುವುದು ಗಿರೀಶ್ ಅವರ ಮುಂದೆ ಇದ್ದ ದೊಡ್ಡ ಸವಾಲು ಆಗಿತ್ತು. ತನಗೆ ಇದ್ದ ಹತ್ತು ಎಕರೆ ಜಮೀನಿನಲ್ಲಿ ಗುಲಾಬಿ ಬೆಳೆಯುವ ನಿರ್ಧಾರ ಮಾಡಿದ ಗಿರೀಶ್ ಅವರು ಒಂದು ಎಕರೆ ವಿಸ್ತಾರದ ಏಳು ಪಾಲಿ ಹೌಸ್ ನಿರ್ಮಾಣ ಮಾಡಿ ಅದರ ಒಳಗೆ ಗುಲಾಬಿ ಬೆಳೆಯಲು ನಿರ್ಧಾರ ಮಾಡಿದರು. ಇನ್ನು ಮಳೆಗಾಲದ ಸಮಯದಲ್ಲಿ ಆ ಪಾಲಿ ಹೌಸ್ ಮನೆಯ ಮೇಲೆ ಬೀಳುವ ಮಳೆಯ ನೀರನ್ನ ಪೈಪ್ ಗಳ ಮೂಲಕ ಹರಿಸಿ ವ್ಯವಸ್ಥಿತವಾಗಿ ನಿರ್ಮಾಣ ಮಾಡಿರುವ ಒಂದು ಕೆರೆಯಲ್ಲಿ ಶೇಖರಣೆ ಮಾಡುವುದು ಮತ್ತು ಆ ಶೇಖರಣೆ ಆದ ನೀರನ್ನ ವರ್ಷಪೂರ್ತಿ ಬಳಸಿಕೊಳ್ಳುವುದು ಗಿರೀಶ್ ಅವರ ಉಪಾಯ ಆಗಿತ್ತು. ಇನ್ನು ಹೀಗೆ ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿದ ಗಿರೀಶ್ ಅವರು ಪಾಲಿ ಹೌಸ್ ಮೇಲೆ ಬೀಳುವ ಮಳೆಯ ನೀರನ್ನ ಬಳಸಿಕೊಂಡು ಗುಲಾಬಿಯನ್ನ ಬೆಳೆಯುತ್ತಿದ್ದಾರೆ.

ಇನ್ನು ಮಳೆಗಾಲದಲ್ಲಿ 1.30 ಲಕ್ಷ ಲೀಟರ್ ಮಳೆಯ ನೀರನ್ನ ಶೇಖರಣೆ ಮಾಡುತ್ತಿರುವ ಗಿರೀಶ್ ಅವರು ಆ ನೀರನ್ನ ಬಳಸಿಕೊಂಡು ಸುಂದರವಾದ ಗುಲಾಬಿ ಹೂವುಗಳನ್ನ ಬೆಳೆಯುತ್ತಿದ್ದಾರೆ. ತಿಂಗಳಿಗೆ ಸುಮಾರು 15000 ಗುಲಾಬಿ ಹೂವುಗಳನ್ನ ಬೆಳೆಯುತ್ತಿರುವ ಗಿರೀಶ್ ಅವರು ಅವುಗಳನ್ನ ಭಾರತ ಮತ್ತು ವಿದೇಶದಲ್ಲಿ ಮಾರಾಟ ಮಾಡುತ್ತಿದ್ದಾರೆ. ಇನ್ನು ಎಮ್ ಟೆಕ್ ಓದಿರುವ ಗಿರೀಶ್ ಅವರ ಪತ್ನಿ ಕೂಡ ಗಂಡನ ಈ ಕೆಲಸಕ್ಕೆ ಕೈ ಜೋಡಿಸಿದ್ದಾರೆ, ಗಿರೀಶ್ ಅವರ ಈ ಉಪಾಯ ಹಲವು ರೈತರಿಗೆ ಸ್ಫೂರ್ತಿ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಆರೋಗ್ಯ

    ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು

  • ದೇಶ-ವಿದೇಶ

    ಸೌದಿಯಲ್ಲಿ ಈಗ ಯೋಗಕ್ಕೆ ನೀಡಲಾಗಿದೆ ಕ್ರೀಡೆಯ ಮಾನ್ಯತೆ..!ತಿಳಿಯಲು ಈ ಲೇಖನ ಓದಿ…

    ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್‌ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…