ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.