ಉಪಯುಕ್ತ ಮಾಹಿತಿ, ಸುದ್ದಿ

ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

221

ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.

ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    256 ವರ್ಷ ಬದುಕಿದ ವ್ಯಕ್ತಿ ಎಷ್ಟು ಪತ್ನಿಯರ ಅಂತ್ಯ ಸಂಸ್ಕಾರ ಮಾಡಿದ್ದ ಗೊತ್ತಾ? ತಿಳಿಯಲು ಈ ಲೇಖನ ಓದಿ ..

    ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…