ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…