ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…