ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…