ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ ಒಬ್ಬ ವಿಜ್ಞಾನಿ ಆಗಿರುತ್ತಾನೆ ಅನ್ನುವುದು ಆಗಿದೆ. ಪ್ರಾರಂಭದಲ್ಲಿ ಎಷ್ಟೇ ನಷ್ಟ ಮತ್ತು ಸೋಲನ್ನ ಅನುಭವಿಸದರು ಅದರಿಂದ ಪಾಠವನ್ನ ಕಲಿತು ಇಂದು ಮಾದರಿಯ ರೈತನಿಗೆ ಹೊರಹೊಮ್ಮಿದ್ದಾರೆ ಈ ರೈತ.

ಹಾಗಾದರೆ ಈ ರೈತ ಯಾರು ಮತ್ತು ಈ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ತಿಳಿಯೋಣ. ನಾವು ಹೇಳುವ ಈ ರೈತನ ಸದಾನಂದ ಮತ್ತು ಇವರು ದೊಡ್ಡಬಳ್ಳಾಪುರದವರು ಆಗಿದ್ದಾರೆ, ಇನ್ನು ಇವರು ಕೂಡ ಪ್ರಾರಂಭದಲ್ಲಿ ಎಲ್ಲಾ ರೈತರು ಮಾಡುವಂತೆ ಇವರು ಎರಡು ತಪ್ಪುಗಳನ್ನ ಮಾಡಿದರು. ಹೌದು ಅಕ್ಕಪಕ್ಕದರು ಈರುಳ್ಳಿ ಅಥವಾ ಟೊಮೆಟೊ ಹಾಕಿದರೆ ಎಲ್ಲಾ ರೈತರು ಕೂಡ ಅದನ್ನೇ ಹಾಕುವುದು ಮತ್ತು ಒಂದು ಎಕರೆ ಜಮೀನು ಇದ್ದರೆ ಆ ಜಮೀನಿನ ಪೂರ್ತಿ ಒಂದೇ ಬೆಳೆಯನ್ನ ಬೆಳೆಯುವುದು, ರೈತರು ಅನುಸರಿಸುವ ಈ ಎರಡು ಮಾರ್ಗಗಳು ಕೂಡ ತುಂಬಾ ಅಪಾಯವಾದವು ಆಗಿದೆ.

ಇನ್ನು ಎಲ್ಲರು ಟೊಮೆಟೊ ಬೆಳೆಯನ್ನ ಬೆಳೆಯುತ್ತಾರೆ ಎಂದು ನಾವು ಕೂಡ ಅದನ್ನೇ ಬೆಳೆದರೆ ಉತ್ಪಾದನೆ ಜಾಸ್ತಿ ಆಗಿ ಬೆಲೆ ಕಡಿಮೆ ಆಗುತ್ತದೆ ಮತ್ತು ಇರುವ ಜಮೀನಿಗೆಲ್ಲ ಒಂದೇ ಬೆಳೆಯನ್ನ ಹಾಕಿದರೆ ಅವು ಒಂದು ಭಾರಿ ನಮ್ಮ ಕೈ ಹಿಡಿಯುತ್ತದೆ ಮತ್ತು ಕೆಲವು ಭಾರಿ ನಮ್ಮ ಕೈ ಸುಡುತ್ತದೆ ಮತ್ತು ನಷ್ಟವಾದರೆ ವ್ಯವಸಾಯದ ಮೇಲೆ ನಂಬಿಕೆ ಕಳೆದು ಹೋಗುತ್ತದೆ. ಪ್ರಾರಂಭದಲ್ಲಿ ಹೀಗೆ ಮಾಡಿದ ಸದಾನಂದ ಅವರು ಕೆಲವು ಭಾರಿ ತಮ್ಮ ಕೈ ಸುಟ್ಟುಕೊಂಡರು ಮತ್ತು ಹೀಗೆ ಮಾಡಿದರೆ ಮುಂದೆ ಕಷ್ಟ ತುಂಬಾ ಕಷ್ಟ ಆಗುತ್ತದೆ ಎಂದು ಅರಿತ ಸದಾನಂದ ಅವರು ಒಂದು ಉಪಾಯ ಮಾಡಿದರು.

ಸದಾನಂದ ಅವರು ತಮಗಿರುವ ಎರಡು ಎಕರೆ ಜಮೀನನ್ನ ವ್ಯವಸ್ಥಿತವಾಗಿ ವಿಂಗಡಿಸಿ ಮೊದಲು ಒಂದಷ್ಟು ಅಡಿಕೆ ಮತ್ತು ತೆಂಗಿನ ಮರಗಳನ್ನ ನೆಟ್ಟರು ಹಾಗೆ ಇನ್ನೊಂದು ಜಾಗದಲ್ಲಿ ಒಂದು ತಿಂಗಳು ಶುಂಠಿ, ಇನ್ನೊಂದು ತಿಂಗಳು ಸಪೋಟ ಮತ್ತು ಒಂದಷ್ಟು ಜಮೀನಿಗೆ ಟೊಮೆಟೊ ಮತ್ತು ಕ್ಯಾಪ್ಸಿಕಮ್ ಮತ್ತು ಹೀಗೆ ಕಾಲದ ಮಿತಿಯನ್ನ ಕೊಟ್ಟು ಸುಮಾರು 30 ಬೆಳೆಗಳನ್ನ ಹಾಕಿದರು. ಇನ್ನು ಸದಾನಂದ ಅವರ ಉಪಾಯ ಹೇಗಿತ್ತು ಅಂದರೆ ಒಂದು ತಿಂಗಳು ಸಪೋಟದಲ್ಲಿ ಒಳ್ಳೆಯ ಲಾಭ ಬಂದರೆ ಇನ್ನೊಂದು ತಿಂಗಳು ಶುಂಠಿಯಲ್ಲಿ ಒಳ್ಳೆಯ ಲಾಭ ಬರುತ್ತಿತ್ತು, ಹೀಗೆ ಪ್ರತಿ ತಿಂಗಳು ಕೈಗೆ ಹಣ ಬರುವಂತೆ ಮಾಡಿಕೊಂಡರು ಸದಾನಂದ ಅವರು.

ಇನ್ನು ಸದಾನಂದ ಅವರ ಉಪಾಯದಲ್ಲಿ ಇರುವ ಇನ್ನೊಂದು ಪ್ರಯೋಜನ ಏನು ಅಂದರೆ ಟೊಮೆಟೊದಲ್ಲಿ ನಷ್ಟವಾದರೆ ಇನ್ನೊಂದರಲ್ಲಿ ಒಳ್ಳೆಯ ಲಾಭ ಸಿಗುತ್ತದೆ, ಹೀಗೆ ತನ್ನ ಉಪಾಯದ ಮೂಲಕ ವರ್ಷಕ್ಕೆ ಸುಮಾರು 22 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ ಸದಾನಂದ ಅವರು. ವ್ಯವಸಾಯ ಅನ್ನುವುದು ಸಂಶೋಧನೆ ಮತ್ತು ಆವಿಷ್ಕಾರ ಇದ್ದಹಾಗೆ ಮತ್ತು ಅದಕ್ಕೆ ಸೀಮಿತ ಮಿತಿ ಅನ್ನುವುದು ಇಲ್ಲ ಹಾಗೆ ಹೊಸ ಹೊಸ ಪ್ರಯೋಗಗಳನ್ನ ಮಾಡುವುದರಿಂದ ಹೊಸ ವಿಧಾನ ಕಂಡುಹಿಡಿಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…