ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1455

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

    ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.