News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

74

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್‍ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.