News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

76

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್‍ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…