ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು.
ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು, ದುಡಿಯುವವರು.
ರಾಜ್ ಬಿ ಶೆಟ್ಟಿ ಎರಡನೇ ವರ್ಗದ ನಿರ್ದೇಶಕ. ಅವರಿಗೆ ಸಿನಿಮಾ ಸೋಲು ಗೆಲುವಿನ ಭಯವಿಲ್ಲ. ತಾವು ಬರೆದ, ತಾವು ನಂಬಿದ ಕಥೆಯನ್ನು ತಮ್ಮ ಮನ ಮುಚ್ಚುವಂತೆ ಮುಂದೆ ಜನ ಮೆಚ್ಚೇ ಮೆಚ್ಚುತ್ತಾರೆ ಎಂಬ ಆಶಯದಲ್ಲಿ ಸಿನಿಮಾ ಮಾಡಿದ್ದಾರೆ. ಮತ್ತು ಆ ನಿಟ್ಟಿನಲ್ಲಿ ಭಾಗಶಃ ಗೆದ್ದಿದ್ದಾರೆ.
ಇಲ್ಲಿ ರಾಜ್ ಒಬ್ಬ ನಿರ್ದೇಶಕನಾಗಿ ಗೆಲ್ಲುವುದರ ಜೊತೆಗೆ ಒಬ್ಬ ಬರಹಗಾರನಾಗಿಯು ಬೆರಗು ಮೂಡಿಸುತ್ತಾರೆ.
ಪ್ರತಿ ಪಾತ್ರಕ್ಕೆ ಅವರು ನೀಡಿರುವ ಸಹಜ ಶೈಲಿಯ ವೈವಿಧ್ಯತೆ ಅಚ್ಚರಿ ಮೂಡಿಸುತ್ತದೆ. ಯಾವೆಲ್ಲ ಕಲಾವಿದರು ಹಾಸ್ಯ ಪಾತ್ರಗಳಿಗೆ ಲಾಯಕ್ಕು ಎಂದು ಭಾವಿಸಲಾಗಿತ್ತೋ ಅವರನ್ನೆಲ್ಲ ಗಂಭೀರ ಪಾತ್ರಗಳಲ್ಲಿ ತೋರಿಸಿ ಗೆಲ್ಲುವ ಮೂಲಕ ಒಬ್ಬ ಕ್ರಿಯಾಶೀಲ ನಿರ್ದೇಶಕ ಯಾವುದೇ ಕಲಾವಿದನ ಇಮೇಜ್ ಬದಲಿಸಬಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ..
ಎಲ್ಲಕ್ಕಿಂತ ಹೆಚ್ಚಾಗಿ ‘ಒಂದು ಮೊಟ್ಟೆಯ ಕಥೆ’ಯಲ್ಲಿ ಕೀಳರಿಮೆ ಹೊಂದಿದ್ದು, ಮಾತನಾಡಲು ಅಂಜುವ ಹಾಸ್ಯಮಯ ಪಾತ್ರಕ್ಕೆ ಜೀವ ತುಂಬಿದ್ದ ರಾಜ್, ಇಲ್ಲಿ ತಮ್ಮ ಇಮೇಜ್ ಅಕ್ಷರಶಃ ಬದಲಾಯಿಸಿದ್ದಾರೆ. ಅವರ ಉಗ್ರರೂಪ ಎಂಥವರನ್ನಾದರೂ ಅರೆಕ್ಷಣ ಬೆಚ್ಚಿ ಬೀಳಿಸುವಂತಿದೆ.
ಸಿನಿಮಾದಲ್ಲಿ ಕ್ರೈಂ ತುಂಬಿದ್ದರೂ, ಅಂಥ ಸನ್ನಿವೇಶಗಳಲ್ಲಿ ರಕ್ತ ಸಿಕ್ತ ದೃಶ್ಯಗಳನ್ನು ಜಾಣ್ಮೆಯಿಂದ ಮರೆಮಾಚಿ, ಧ್ವನಿ, ನೆರಳು, ಕ್ಯಾಮೆರಾ ಮೂಮೆಂಟ್ ಮೂಲಕವೇ ಆ ರೌದ್ರವನ್ನು ನೋಡುಗರಿಗೆ ಫೀಲ್ ಮಾಡಿಸುತ್ತಾರೆ. ಮತ್ತು ಅಂಥ ದೃಶ್ಯವನ್ನು ನೋಡುಗರಿಗೆ ಸಹ್ಯ ಎನಿಸುವಂತೆ ಮಾಡಿದ್ದಾರೆ. ಒಬ್ಬ ನಟನಾಗಿಯು ರಾಜ್ ಬಿ ಶೆಟ್ಟಿ ಪರಕಾಯ ಪ್ರವೇಶ ಮಾಡಿದ್ದಾರೆ. ರಿಷಭ್ ಶೆಟ್ಟಿ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಆಯ್ಕೆ ಸಮರ್ಥ, ಅಭಿನಯ ಅದ್ಭುತ.
ಕನ್ನಡದಲ್ಲಿ ಕ್ರಿಯಾಶೀಲ ಕಥೆ ಮತ್ತು ನಿರ್ದೇಶಕರನ್ನು ಹುಡುಕುತ್ತಿದ್ದ ಸಿನಿಮಾಪ್ರಿಯರಿಗೆ ರಾಜ್ ಬಿ ಶೆಟ್ಟಿ ಹೊಸ ಆಶಾಕಿರಣ. ಒಂದು ಕಡೆ ಸಿನಿಮಾಸೂತ್ರಗಳನ್ನಿಟ್ಟುಕೊಂಡು ಅದದೇ ಹೀರೋಯಿಸಂ, ಬಿಲ್ಡಪ್, ಕೌಂಟರ್ ಡೈಲಾಗ್ ಆಧಾರಿತ ನಿರ್ದೇಶಕರು ಹೇರಳವಾಗಿರುವಾಗಿ, ಅದೆಲ್ಲದರ ಹೊರತಾಗಿಯು ಸಿನಿಮಾ ಮಾಡಬಲ್ಲೆ, ಮಾಡಿ ಗೆಲ್ಲಬಲ್ಲೆ ಎಂಬ ಮನೋಭಾವದ ವಿರಳ ನಿರ್ದೇಶಕರ ಸಾಲಿನಲ್ಲಿ ರಾಜ್ ನಿಲ್ಲುತ್ತಾರೆ.
ರಾಜ್ ಅವರಿಗೆ ಕಥನ ಹೇಳುವ ಶೈಲಿ ಚೆನ್ನಾಗಿ ಒಲಿದಿದೆ. ಒಂದು ಸಾಮಾನ್ಯ ಕಥೆಯನ್ನು ಹೊಸತನದ ನಿರೂಪಣಾ ಶೈಲಿಯಿಂದ ವಿಶೇಷವಾಗಿ ತೋರಿಸುತ್ತಾರೆ.
‘ಗರುಡ ಗಮನ ವೃಷಭ ವಾಹನ’ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದಾ ಎಂದು ಕೇಳಿದರೆ ನನ್ನ ಉತ್ತರ ಇಷ್ಟೇ.. ಅದು ನೋಡುಗರ ಅಭಿರುಚಿಯನ್ನು ಅವಲಂಬಿಸಿದೆ. ಕಮರ್ಷಿಯಲ್ ಸೂತ್ರಗಳ ಸಿನಿಮಾ ಪ್ರಿಯರಿಗೆ ಇದು ರುಚಿಸದಿದ್ದರೆ ಅಚ್ಚರಿಯಲ್ಲ. ಯಾವ ಸಿನಿಮಾಗಳು ಲೋಪ ದೋಷಗಳಿಗೆ ಹೊರತಲ್ಲ. ಅಂತೆಯೇ ಇಲ್ಲೂ ದ್ವಿತೀಯಾರ್ಧ ಸ್ವಲ್ಪ ಸುದೀರ್ಘವೆನಿಸುತ್ತದೆ. ಆದರೆ ಎಲ್ಲರ ನಿರೀಕ್ಷೆ ಮೀರಿದ ರೀತಿಯಲ್ಲಿ ಕಥೆ ಸಾಗುವುದರಿಂದ ಅಲ್ಲಲ್ಲಿ ವಾವ್ ಫ್ಯಾಕ್ಟರ್ ಗಳಿದೆ. ಮತ್ತದು ಇಷ್ಟವಾಗುತ್ತೆ.
ಆದರೆ ರಾಜ್ ಬಿ ಶೆಟ್ಟಿ ಒಂದಷ್ಟು ಅದ್ಭುತ ಸಿನಿಮಾಗಳನ್ನು ಕೊಡಬಲ್ಲ ಕನಸು ಮತ್ತು ಕಸುವನ್ನು ಹೊಂದಿರುವ ನಿರ್ದೇಶಕ ಎಂಬುದು ಸತ್ಯ.
ಅವರ ಸಿನಿಮಾಪ್ರೀತಿಗೆ, ಬರಹಕ್ಕೆ ಎಂಥವರಾದರೂ ಅಭಿಮಾನಿಯಾಗುತ್ತಾರೆ.
ಕ್ಯಾಮೆರಾ ವರ್ಕ್, ಎಡಿಟಿಂಗ್ ಸಕತ್ತಾಗಿ ಬ್ಲೆಂಡ್ ಆಗಿದೆ.
ಮಿಥುನ್ ಮುಕುಂದನ್ ಅವರ ಹಿನ್ನೆಲೆ ಸಂಗೀತ ಬೇರೆಯದೇ ಫೀಲ್ ಕೊಡುತ್ತದೆ, ಕಾಡುತ್ತದೆ, ಆವರಿಸುತ್ತದೆ.
ಇಂಥದ್ದೊಂದು ಕಥೆ ನಂಬಿ ಹಣ ಹೂಡಿದ ನಿರ್ಮಾಪಕರಿಗೂ ಮೆಚ್ಚುಗೆ ಸಲ್ಲಲೇಬೇಕು.
ಮಲಯಾಳಂ, ತಮಿಳಿನ ಪ್ರಯೋಗಾತ್ಮಕ ಚಿತ್ರಗಳನ್ನು ಮೆಚ್ಚಿ ಹೊಗಳುವವರಿಗೆ ಈ ಚಿತ್ರ ಹೆಚ್ಚು ಆಪ್ತ ಎನಿಸುತ್ತದೆ. ಮತ್ತು ನಾವು ಈಗ ಪರಭಾಷಾ ನಿರ್ದೇಶಕರ ಅಭಿಮಾನಿಗಳಿಗೂ ಈ ಚಿತ್ರವನ್ನು ರೆಫರ್ ಮಾಡಬಹುದು. ಆ ಬಳಿಕ ಅವರು ಸಹ ರಾಜ್ ಅವರನ್ನು ಹೊಗಳುವುದನ್ನು ಕಂಡು ಸಂಭ್ರಮಿಸಬಹುದು.
ಒಮ್ಮೆ ನೋಡಿ, ಹೊಸತನಕ್ಕೆ ಬೆಂಬಲ ನೀಡಿ.
Good luck and congratulations for the tremendous success Raj B Shetty
ಧನ್ಯವಾದಗಳೊಂದಿಗೆ
ಟಿ.ಜಿ.ನಂದೀಶ್, ತೀರ್ಥಹಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…