ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು.
ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು, ದುಡಿಯುವವರು.
ರಾಜ್ ಬಿ ಶೆಟ್ಟಿ ಎರಡನೇ ವರ್ಗದ ನಿರ್ದೇಶಕ. ಅವರಿಗೆ ಸಿನಿಮಾ ಸೋಲು ಗೆಲುವಿನ ಭಯವಿಲ್ಲ. ತಾವು ಬರೆದ, ತಾವು ನಂಬಿದ ಕಥೆಯನ್ನು ತಮ್ಮ ಮನ ಮುಚ್ಚುವಂತೆ ಮುಂದೆ ಜನ ಮೆಚ್ಚೇ ಮೆಚ್ಚುತ್ತಾರೆ ಎಂಬ ಆಶಯದಲ್ಲಿ ಸಿನಿಮಾ ಮಾಡಿದ್ದಾರೆ. ಮತ್ತು ಆ ನಿಟ್ಟಿನಲ್ಲಿ ಭಾಗಶಃ ಗೆದ್ದಿದ್ದಾರೆ.
ಇಲ್ಲಿ ರಾಜ್ ಒಬ್ಬ ನಿರ್ದೇಶಕನಾಗಿ ಗೆಲ್ಲುವುದರ ಜೊತೆಗೆ ಒಬ್ಬ ಬರಹಗಾರನಾಗಿಯು ಬೆರಗು ಮೂಡಿಸುತ್ತಾರೆ.
ಪ್ರತಿ ಪಾತ್ರಕ್ಕೆ ಅವರು ನೀಡಿರುವ ಸಹಜ ಶೈಲಿಯ ವೈವಿಧ್ಯತೆ ಅಚ್ಚರಿ ಮೂಡಿಸುತ್ತದೆ. ಯಾವೆಲ್ಲ ಕಲಾವಿದರು ಹಾಸ್ಯ ಪಾತ್ರಗಳಿಗೆ ಲಾಯಕ್ಕು ಎಂದು ಭಾವಿಸಲಾಗಿತ್ತೋ ಅವರನ್ನೆಲ್ಲ ಗಂಭೀರ ಪಾತ್ರಗಳಲ್ಲಿ ತೋರಿಸಿ ಗೆಲ್ಲುವ ಮೂಲಕ ಒಬ್ಬ ಕ್ರಿಯಾಶೀಲ ನಿರ್ದೇಶಕ ಯಾವುದೇ ಕಲಾವಿದನ ಇಮೇಜ್ ಬದಲಿಸಬಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ..
ಎಲ್ಲಕ್ಕಿಂತ ಹೆಚ್ಚಾಗಿ ‘ಒಂದು ಮೊಟ್ಟೆಯ ಕಥೆ’ಯಲ್ಲಿ ಕೀಳರಿಮೆ ಹೊಂದಿದ್ದು, ಮಾತನಾಡಲು ಅಂಜುವ ಹಾಸ್ಯಮಯ ಪಾತ್ರಕ್ಕೆ ಜೀವ ತುಂಬಿದ್ದ ರಾಜ್, ಇಲ್ಲಿ ತಮ್ಮ ಇಮೇಜ್ ಅಕ್ಷರಶಃ ಬದಲಾಯಿಸಿದ್ದಾರೆ. ಅವರ ಉಗ್ರರೂಪ ಎಂಥವರನ್ನಾದರೂ ಅರೆಕ್ಷಣ ಬೆಚ್ಚಿ ಬೀಳಿಸುವಂತಿದೆ.
ಸಿನಿಮಾದಲ್ಲಿ ಕ್ರೈಂ ತುಂಬಿದ್ದರೂ, ಅಂಥ ಸನ್ನಿವೇಶಗಳಲ್ಲಿ ರಕ್ತ ಸಿಕ್ತ ದೃಶ್ಯಗಳನ್ನು ಜಾಣ್ಮೆಯಿಂದ ಮರೆಮಾಚಿ, ಧ್ವನಿ, ನೆರಳು, ಕ್ಯಾಮೆರಾ ಮೂಮೆಂಟ್ ಮೂಲಕವೇ ಆ ರೌದ್ರವನ್ನು ನೋಡುಗರಿಗೆ ಫೀಲ್ ಮಾಡಿಸುತ್ತಾರೆ. ಮತ್ತು ಅಂಥ ದೃಶ್ಯವನ್ನು ನೋಡುಗರಿಗೆ ಸಹ್ಯ ಎನಿಸುವಂತೆ ಮಾಡಿದ್ದಾರೆ. ಒಬ್ಬ ನಟನಾಗಿಯು ರಾಜ್ ಬಿ ಶೆಟ್ಟಿ ಪರಕಾಯ ಪ್ರವೇಶ ಮಾಡಿದ್ದಾರೆ. ರಿಷಭ್ ಶೆಟ್ಟಿ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಆಯ್ಕೆ ಸಮರ್ಥ, ಅಭಿನಯ ಅದ್ಭುತ.
ಕನ್ನಡದಲ್ಲಿ ಕ್ರಿಯಾಶೀಲ ಕಥೆ ಮತ್ತು ನಿರ್ದೇಶಕರನ್ನು ಹುಡುಕುತ್ತಿದ್ದ ಸಿನಿಮಾಪ್ರಿಯರಿಗೆ ರಾಜ್ ಬಿ ಶೆಟ್ಟಿ ಹೊಸ ಆಶಾಕಿರಣ. ಒಂದು ಕಡೆ ಸಿನಿಮಾಸೂತ್ರಗಳನ್ನಿಟ್ಟುಕೊಂಡು ಅದದೇ ಹೀರೋಯಿಸಂ, ಬಿಲ್ಡಪ್, ಕೌಂಟರ್ ಡೈಲಾಗ್ ಆಧಾರಿತ ನಿರ್ದೇಶಕರು ಹೇರಳವಾಗಿರುವಾಗಿ, ಅದೆಲ್ಲದರ ಹೊರತಾಗಿಯು ಸಿನಿಮಾ ಮಾಡಬಲ್ಲೆ, ಮಾಡಿ ಗೆಲ್ಲಬಲ್ಲೆ ಎಂಬ ಮನೋಭಾವದ ವಿರಳ ನಿರ್ದೇಶಕರ ಸಾಲಿನಲ್ಲಿ ರಾಜ್ ನಿಲ್ಲುತ್ತಾರೆ.
ರಾಜ್ ಅವರಿಗೆ ಕಥನ ಹೇಳುವ ಶೈಲಿ ಚೆನ್ನಾಗಿ ಒಲಿದಿದೆ. ಒಂದು ಸಾಮಾನ್ಯ ಕಥೆಯನ್ನು ಹೊಸತನದ ನಿರೂಪಣಾ ಶೈಲಿಯಿಂದ ವಿಶೇಷವಾಗಿ ತೋರಿಸುತ್ತಾರೆ.
‘ಗರುಡ ಗಮನ ವೃಷಭ ವಾಹನ’ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದಾ ಎಂದು ಕೇಳಿದರೆ ನನ್ನ ಉತ್ತರ ಇಷ್ಟೇ.. ಅದು ನೋಡುಗರ ಅಭಿರುಚಿಯನ್ನು ಅವಲಂಬಿಸಿದೆ. ಕಮರ್ಷಿಯಲ್ ಸೂತ್ರಗಳ ಸಿನಿಮಾ ಪ್ರಿಯರಿಗೆ ಇದು ರುಚಿಸದಿದ್ದರೆ ಅಚ್ಚರಿಯಲ್ಲ. ಯಾವ ಸಿನಿಮಾಗಳು ಲೋಪ ದೋಷಗಳಿಗೆ ಹೊರತಲ್ಲ. ಅಂತೆಯೇ ಇಲ್ಲೂ ದ್ವಿತೀಯಾರ್ಧ ಸ್ವಲ್ಪ ಸುದೀರ್ಘವೆನಿಸುತ್ತದೆ. ಆದರೆ ಎಲ್ಲರ ನಿರೀಕ್ಷೆ ಮೀರಿದ ರೀತಿಯಲ್ಲಿ ಕಥೆ ಸಾಗುವುದರಿಂದ ಅಲ್ಲಲ್ಲಿ ವಾವ್ ಫ್ಯಾಕ್ಟರ್ ಗಳಿದೆ. ಮತ್ತದು ಇಷ್ಟವಾಗುತ್ತೆ.
ಆದರೆ ರಾಜ್ ಬಿ ಶೆಟ್ಟಿ ಒಂದಷ್ಟು ಅದ್ಭುತ ಸಿನಿಮಾಗಳನ್ನು ಕೊಡಬಲ್ಲ ಕನಸು ಮತ್ತು ಕಸುವನ್ನು ಹೊಂದಿರುವ ನಿರ್ದೇಶಕ ಎಂಬುದು ಸತ್ಯ.
ಅವರ ಸಿನಿಮಾಪ್ರೀತಿಗೆ, ಬರಹಕ್ಕೆ ಎಂಥವರಾದರೂ ಅಭಿಮಾನಿಯಾಗುತ್ತಾರೆ.
ಕ್ಯಾಮೆರಾ ವರ್ಕ್, ಎಡಿಟಿಂಗ್ ಸಕತ್ತಾಗಿ ಬ್ಲೆಂಡ್ ಆಗಿದೆ.
ಮಿಥುನ್ ಮುಕುಂದನ್ ಅವರ ಹಿನ್ನೆಲೆ ಸಂಗೀತ ಬೇರೆಯದೇ ಫೀಲ್ ಕೊಡುತ್ತದೆ, ಕಾಡುತ್ತದೆ, ಆವರಿಸುತ್ತದೆ.
ಇಂಥದ್ದೊಂದು ಕಥೆ ನಂಬಿ ಹಣ ಹೂಡಿದ ನಿರ್ಮಾಪಕರಿಗೂ ಮೆಚ್ಚುಗೆ ಸಲ್ಲಲೇಬೇಕು.
ಮಲಯಾಳಂ, ತಮಿಳಿನ ಪ್ರಯೋಗಾತ್ಮಕ ಚಿತ್ರಗಳನ್ನು ಮೆಚ್ಚಿ ಹೊಗಳುವವರಿಗೆ ಈ ಚಿತ್ರ ಹೆಚ್ಚು ಆಪ್ತ ಎನಿಸುತ್ತದೆ. ಮತ್ತು ನಾವು ಈಗ ಪರಭಾಷಾ ನಿರ್ದೇಶಕರ ಅಭಿಮಾನಿಗಳಿಗೂ ಈ ಚಿತ್ರವನ್ನು ರೆಫರ್ ಮಾಡಬಹುದು. ಆ ಬಳಿಕ ಅವರು ಸಹ ರಾಜ್ ಅವರನ್ನು ಹೊಗಳುವುದನ್ನು ಕಂಡು ಸಂಭ್ರಮಿಸಬಹುದು.
ಒಮ್ಮೆ ನೋಡಿ, ಹೊಸತನಕ್ಕೆ ಬೆಂಬಲ ನೀಡಿ.
Good luck and congratulations for the tremendous success Raj B Shetty
ಧನ್ಯವಾದಗಳೊಂದಿಗೆ
ಟಿ.ಜಿ.ನಂದೀಶ್, ತೀರ್ಥಹಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….