News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

32

ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು.

ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು, ದುಡಿಯುವವರು.

ರಾಜ್ ಬಿ ಶೆಟ್ಟಿ ಎರಡನೇ ವರ್ಗದ ನಿರ್ದೇಶಕ. ಅವರಿಗೆ ಸಿನಿಮಾ ಸೋಲು ಗೆಲುವಿನ ಭಯವಿಲ್ಲ. ತಾವು ಬರೆದ, ತಾವು ನಂಬಿದ ಕಥೆಯನ್ನು ತಮ್ಮ ಮನ ಮುಚ್ಚುವಂತೆ ಮುಂದೆ ಜನ‌ ಮೆಚ್ಚೇ ಮೆಚ್ಚುತ್ತಾರೆ ಎಂಬ ಆಶಯದಲ್ಲಿ ಸಿನಿಮಾ‌ ಮಾಡಿದ್ದಾರೆ. ಮತ್ತು ಆ ನಿಟ್ಟಿನಲ್ಲಿ ಭಾಗಶಃ ಗೆದ್ದಿದ್ದಾರೆ.

ಇಲ್ಲಿ ರಾಜ್ ಒಬ್ಬ ನಿರ್ದೇಶಕನಾಗಿ ಗೆಲ್ಲುವುದರ ಜೊತೆಗೆ ಒಬ್ಬ ಬರಹಗಾರನಾಗಿಯು ಬೆರಗು ಮೂಡಿಸುತ್ತಾರೆ.

ಪ್ರತಿ ಪಾತ್ರಕ್ಕೆ ಅವರು ನೀಡಿರುವ ಸಹಜ ಶೈಲಿಯ ವೈವಿಧ್ಯತೆ ಅಚ್ಚರಿ ಮೂಡಿಸುತ್ತದೆ. ಯಾವೆಲ್ಲ ಕಲಾವಿದರು ಹಾಸ್ಯ ಪಾತ್ರಗಳಿಗೆ ಲಾಯಕ್ಕು ಎಂದು ಭಾವಿಸಲಾಗಿತ್ತೋ ಅವರನ್ನೆಲ್ಲ ಗಂಭೀರ ಪಾತ್ರಗಳಲ್ಲಿ ತೋರಿಸಿ ಗೆಲ್ಲುವ ಮೂಲಕ ಒಬ್ಬ ಕ್ರಿಯಾಶೀಲ ನಿರ್ದೇಶಕ ಯಾವುದೇ ಕಲಾವಿದನ ಇಮೇಜ್ ಬದಲಿಸಬಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ..

ಎಲ್ಲಕ್ಕಿಂತ ಹೆಚ್ಚಾಗಿ ‘ಒಂದು ಮೊಟ್ಟೆಯ ಕಥೆ’ಯಲ್ಲಿ ಕೀಳರಿಮೆ ಹೊಂದಿದ್ದು, ಮಾತನಾಡಲು ಅಂಜುವ ಹಾಸ್ಯಮಯ ಪಾತ್ರಕ್ಕೆ ಜೀವ‌ ತುಂಬಿದ್ದ ರಾಜ್, ಇಲ್ಲಿ ತಮ್ಮ ಇಮೇಜ್ ಅಕ್ಷರಶಃ ಬದಲಾಯಿಸಿದ್ದಾರೆ. ಅವರ ಉಗ್ರರೂಪ ಎಂಥವರನ್ನಾದರೂ ಅರೆಕ್ಷಣ ಬೆಚ್ಚಿ ಬೀಳಿಸುವಂತಿದೆ.

ಸಿನಿಮಾದಲ್ಲಿ ಕ್ರೈಂ ತುಂಬಿದ್ದರೂ, ಅಂಥ ಸನ್ನಿವೇಶಗಳಲ್ಲಿ ರಕ್ತ ಸಿಕ್ತ ದೃಶ್ಯಗಳನ್ನು ಜಾಣ್ಮೆಯಿಂದ ಮರೆಮಾಚಿ, ಧ್ವನಿ, ನೆರಳು, ಕ್ಯಾಮೆರಾ ಮೂಮೆಂಟ್ ಮೂಲಕವೇ ಆ ರೌದ್ರವನ್ನು ನೋಡುಗರಿಗೆ ಫೀಲ್ ಮಾಡಿಸುತ್ತಾರೆ. ಮತ್ತು ಅಂಥ ದೃಶ್ಯವನ್ನು ನೋಡುಗರಿಗೆ ಸಹ್ಯ ಎನಿಸುವಂತೆ ಮಾಡಿದ್ದಾರೆ. ಒಬ್ಬ ನಟನಾಗಿಯು ರಾಜ್ ಬಿ ಶೆಟ್ಟಿ ಪರಕಾಯ ಪ್ರವೇಶ ಮಾಡಿದ್ದಾರೆ. ರಿಷಭ್ ಶೆಟ್ಟಿ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಆಯ್ಕೆ ಸಮರ್ಥ, ಅಭಿನಯ ಅದ್ಭುತ.

ಕನ್ನಡದಲ್ಲಿ ಕ್ರಿಯಾಶೀಲ ಕಥೆ ಮತ್ತು ನಿರ್ದೇಶಕರನ್ನು ಹುಡುಕುತ್ತಿದ್ದ ಸಿನಿಮಾಪ್ರಿಯರಿಗೆ ರಾಜ್ ಬಿ ಶೆಟ್ಟಿ ಹೊಸ ಆಶಾಕಿರಣ. ಒಂದು ಕಡೆ ಸಿನಿಮಾಸೂತ್ರಗಳನ್ನಿಟ್ಟುಕೊಂಡು ಅದದೇ ಹೀರೋಯಿಸಂ, ಬಿಲ್ಡಪ್, ಕೌಂಟರ್ ಡೈಲಾಗ್ ಆಧಾರಿತ ನಿರ್ದೇಶಕರು ಹೇರಳವಾಗಿರುವಾಗಿ, ಅದೆಲ್ಲದರ ಹೊರತಾಗಿಯು ಸಿನಿಮಾ‌ ಮಾಡಬಲ್ಲೆ, ಮಾಡಿ ಗೆಲ್ಲಬಲ್ಲೆ ಎಂಬ ಮನೋಭಾವದ ವಿರಳ ನಿರ್ದೇಶಕರ ಸಾಲಿನಲ್ಲಿ ರಾಜ್ ನಿಲ್ಲುತ್ತಾರೆ.

ರಾಜ್ ಅವರಿಗೆ ಕಥನ ಹೇಳುವ ಶೈಲಿ ಚೆನ್ನಾಗಿ ಒಲಿದಿದೆ. ಒಂದು ಸಾಮಾನ್ಯ ಕಥೆಯನ್ನು ಹೊಸತನದ‌ ನಿರೂಪಣಾ‌ ಶೈಲಿಯಿಂದ ವಿಶೇಷವಾಗಿ ತೋರಿಸುತ್ತಾರೆ.

‘ಗರುಡ ಗಮನ ವೃಷಭ ವಾಹನ’ ಚಿತ್ರ ಎಲ್ಲರಿಗೂ ‌ಇಷ್ಟವಾಗುತ್ತದಾ ಎಂದು ಕೇಳಿದರೆ ನನ್ನ ಉತ್ತರ ಇಷ್ಟೇ.. ಅದು‌ ನೋಡುಗರ ಅಭಿರುಚಿಯನ್ನು ಅವಲಂಬಿಸಿದೆ. ಕಮರ್ಷಿಯಲ್ ಸೂತ್ರಗಳ ಸಿನಿಮಾ ಪ್ರಿಯರಿಗೆ ಇದು ರುಚಿಸದಿದ್ದರೆ ಅಚ್ಚರಿಯಲ್ಲ. ಯಾವ ಸಿನಿಮಾಗಳು ಲೋಪ ದೋಷಗಳಿಗೆ ಹೊರತಲ್ಲ. ಅಂತೆಯೇ ಇಲ್ಲೂ ದ್ವಿತೀಯಾರ್ಧ ಸ್ವಲ್ಪ ಸುದೀರ್ಘವೆನಿಸುತ್ತದೆ. ಆದರೆ ಎಲ್ಲರ ನಿರೀಕ್ಷೆ ಮೀರಿದ ರೀತಿಯಲ್ಲಿ ಕಥೆ ಸಾಗುವುದರಿಂದ ಅಲ್ಲಲ್ಲಿ ವಾವ್ ಫ್ಯಾಕ್ಟರ್ ಗಳಿದೆ‌. ಮತ್ತದು ಇಷ್ಟವಾಗುತ್ತೆ‌.

ಆದರೆ ರಾಜ್ ಬಿ ಶೆಟ್ಟಿ ಒಂದಷ್ಟು ಅದ್ಭುತ ಸಿನಿಮಾಗಳನ್ನು ಕೊಡಬಲ್ಲ ಕನಸು ಮತ್ತು ಕಸುವನ್ನು ಹೊಂದಿರುವ ನಿರ್ದೇಶಕ ಎಂಬುದು ಸತ್ಯ.

ಅವರ ಸಿನಿಮಾಪ್ರೀತಿಗೆ, ಬರಹಕ್ಕೆ ಎಂಥವರಾದರೂ ಅಭಿಮಾನಿಯಾಗುತ್ತಾರೆ.

ಕ್ಯಾಮೆರಾ ವರ್ಕ್, ಎಡಿಟಿಂಗ್ ಸಕತ್ತಾಗಿ ಬ್ಲೆಂಡ್ ಆಗಿದೆ.

ಮಿಥುನ್ ಮುಕುಂದನ್ ಅವರ ಹಿನ್ನೆಲೆ ಸಂಗೀತ ಬೇರೆಯದೇ ಫೀಲ್ ಕೊಡುತ್ತದೆ, ಕಾಡುತ್ತದೆ, ಆವರಿಸುತ್ತದೆ.

ಇಂಥದ್ದೊಂದು ಕಥೆ ನಂಬಿ ಹಣ ಹೂಡಿದ ನಿರ್ಮಾಪಕರಿಗೂ ಮೆಚ್ಚುಗೆ ಸಲ್ಲಲೇಬೇಕು.

ಮಲಯಾಳಂ, ತಮಿಳಿನ ಪ್ರಯೋಗಾತ್ಮಕ ಚಿತ್ರಗಳನ್ನು ಮೆಚ್ಚಿ ಹೊಗಳುವವರಿಗೆ ಈ ಚಿತ್ರ ಹೆಚ್ಚು ಆಪ್ತ ಎನಿಸುತ್ತದೆ. ಮತ್ತು ನಾವು ಈಗ ಪರಭಾಷಾ ನಿರ್ದೇಶಕರ ಅಭಿಮಾನಿಗಳಿಗೂ ಈ ಚಿತ್ರವನ್ನು ರೆಫರ್ ಮಾಡಬಹುದು. ಆ ಬಳಿಕ ಅವರು ಸಹ ರಾಜ್ ಅವರನ್ನು ಹೊಗಳುವುದನ್ನು ಕಂಡು ಸಂಭ್ರಮಿಸಬಹುದು.

ಒಮ್ಮೆ ನೋಡಿ, ಹೊಸತನಕ್ಕೆ ಬೆಂಬಲ ನೀಡಿ.

Good luck and congratulations for the tremendous success Raj B Shetty

ಧನ್ಯವಾದಗಳೊಂದಿಗೆ

ಟಿ.ಜಿ.ನಂದೀಶ್, ತೀರ್ಥಹಳ್ಳಿ.

About the author / 

Raj Rao

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಸುದ್ದಿ

    ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

    ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…