ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು.

ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು, ದುಡಿಯುವವರು.
ರಾಜ್ ಬಿ ಶೆಟ್ಟಿ ಎರಡನೇ ವರ್ಗದ ನಿರ್ದೇಶಕ. ಅವರಿಗೆ ಸಿನಿಮಾ ಸೋಲು ಗೆಲುವಿನ ಭಯವಿಲ್ಲ. ತಾವು ಬರೆದ, ತಾವು ನಂಬಿದ ಕಥೆಯನ್ನು ತಮ್ಮ ಮನ ಮುಚ್ಚುವಂತೆ ಮುಂದೆ ಜನ ಮೆಚ್ಚೇ ಮೆಚ್ಚುತ್ತಾರೆ ಎಂಬ ಆಶಯದಲ್ಲಿ ಸಿನಿಮಾ ಮಾಡಿದ್ದಾರೆ. ಮತ್ತು ಆ ನಿಟ್ಟಿನಲ್ಲಿ ಭಾಗಶಃ ಗೆದ್ದಿದ್ದಾರೆ.

ಇಲ್ಲಿ ರಾಜ್ ಒಬ್ಬ ನಿರ್ದೇಶಕನಾಗಿ ಗೆಲ್ಲುವುದರ ಜೊತೆಗೆ ಒಬ್ಬ ಬರಹಗಾರನಾಗಿಯು ಬೆರಗು ಮೂಡಿಸುತ್ತಾರೆ.
ಪ್ರತಿ ಪಾತ್ರಕ್ಕೆ ಅವರು ನೀಡಿರುವ ಸಹಜ ಶೈಲಿಯ ವೈವಿಧ್ಯತೆ ಅಚ್ಚರಿ ಮೂಡಿಸುತ್ತದೆ. ಯಾವೆಲ್ಲ ಕಲಾವಿದರು ಹಾಸ್ಯ ಪಾತ್ರಗಳಿಗೆ ಲಾಯಕ್ಕು ಎಂದು ಭಾವಿಸಲಾಗಿತ್ತೋ ಅವರನ್ನೆಲ್ಲ ಗಂಭೀರ ಪಾತ್ರಗಳಲ್ಲಿ ತೋರಿಸಿ ಗೆಲ್ಲುವ ಮೂಲಕ ಒಬ್ಬ ಕ್ರಿಯಾಶೀಲ ನಿರ್ದೇಶಕ ಯಾವುದೇ ಕಲಾವಿದನ ಇಮೇಜ್ ಬದಲಿಸಬಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ..
ಎಲ್ಲಕ್ಕಿಂತ ಹೆಚ್ಚಾಗಿ ‘ಒಂದು ಮೊಟ್ಟೆಯ ಕಥೆ’ಯಲ್ಲಿ ಕೀಳರಿಮೆ ಹೊಂದಿದ್ದು, ಮಾತನಾಡಲು ಅಂಜುವ ಹಾಸ್ಯಮಯ ಪಾತ್ರಕ್ಕೆ ಜೀವ ತುಂಬಿದ್ದ ರಾಜ್, ಇಲ್ಲಿ ತಮ್ಮ ಇಮೇಜ್ ಅಕ್ಷರಶಃ ಬದಲಾಯಿಸಿದ್ದಾರೆ. ಅವರ ಉಗ್ರರೂಪ ಎಂಥವರನ್ನಾದರೂ ಅರೆಕ್ಷಣ ಬೆಚ್ಚಿ ಬೀಳಿಸುವಂತಿದೆ.
ಸಿನಿಮಾದಲ್ಲಿ ಕ್ರೈಂ ತುಂಬಿದ್ದರೂ, ಅಂಥ ಸನ್ನಿವೇಶಗಳಲ್ಲಿ ರಕ್ತ ಸಿಕ್ತ ದೃಶ್ಯಗಳನ್ನು ಜಾಣ್ಮೆಯಿಂದ ಮರೆಮಾಚಿ, ಧ್ವನಿ, ನೆರಳು, ಕ್ಯಾಮೆರಾ ಮೂಮೆಂಟ್ ಮೂಲಕವೇ ಆ ರೌದ್ರವನ್ನು ನೋಡುಗರಿಗೆ ಫೀಲ್ ಮಾಡಿಸುತ್ತಾರೆ. ಮತ್ತು ಅಂಥ ದೃಶ್ಯವನ್ನು ನೋಡುಗರಿಗೆ ಸಹ್ಯ ಎನಿಸುವಂತೆ ಮಾಡಿದ್ದಾರೆ. ಒಬ್ಬ ನಟನಾಗಿಯು ರಾಜ್ ಬಿ ಶೆಟ್ಟಿ ಪರಕಾಯ ಪ್ರವೇಶ ಮಾಡಿದ್ದಾರೆ. ರಿಷಭ್ ಶೆಟ್ಟಿ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಆಯ್ಕೆ ಸಮರ್ಥ, ಅಭಿನಯ ಅದ್ಭುತ.
ಕನ್ನಡದಲ್ಲಿ ಕ್ರಿಯಾಶೀಲ ಕಥೆ ಮತ್ತು ನಿರ್ದೇಶಕರನ್ನು ಹುಡುಕುತ್ತಿದ್ದ ಸಿನಿಮಾಪ್ರಿಯರಿಗೆ ರಾಜ್ ಬಿ ಶೆಟ್ಟಿ ಹೊಸ ಆಶಾಕಿರಣ. ಒಂದು ಕಡೆ ಸಿನಿಮಾಸೂತ್ರಗಳನ್ನಿಟ್ಟುಕೊಂಡು ಅದದೇ ಹೀರೋಯಿಸಂ, ಬಿಲ್ಡಪ್, ಕೌಂಟರ್ ಡೈಲಾಗ್ ಆಧಾರಿತ ನಿರ್ದೇಶಕರು ಹೇರಳವಾಗಿರುವಾಗಿ, ಅದೆಲ್ಲದರ ಹೊರತಾಗಿಯು ಸಿನಿಮಾ ಮಾಡಬಲ್ಲೆ, ಮಾಡಿ ಗೆಲ್ಲಬಲ್ಲೆ ಎಂಬ ಮನೋಭಾವದ ವಿರಳ ನಿರ್ದೇಶಕರ ಸಾಲಿನಲ್ಲಿ ರಾಜ್ ನಿಲ್ಲುತ್ತಾರೆ.
ರಾಜ್ ಅವರಿಗೆ ಕಥನ ಹೇಳುವ ಶೈಲಿ ಚೆನ್ನಾಗಿ ಒಲಿದಿದೆ. ಒಂದು ಸಾಮಾನ್ಯ ಕಥೆಯನ್ನು ಹೊಸತನದ ನಿರೂಪಣಾ ಶೈಲಿಯಿಂದ ವಿಶೇಷವಾಗಿ ತೋರಿಸುತ್ತಾರೆ.
‘ಗರುಡ ಗಮನ ವೃಷಭ ವಾಹನ’ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದಾ ಎಂದು ಕೇಳಿದರೆ ನನ್ನ ಉತ್ತರ ಇಷ್ಟೇ.. ಅದು ನೋಡುಗರ ಅಭಿರುಚಿಯನ್ನು ಅವಲಂಬಿಸಿದೆ. ಕಮರ್ಷಿಯಲ್ ಸೂತ್ರಗಳ ಸಿನಿಮಾ ಪ್ರಿಯರಿಗೆ ಇದು ರುಚಿಸದಿದ್ದರೆ ಅಚ್ಚರಿಯಲ್ಲ. ಯಾವ ಸಿನಿಮಾಗಳು ಲೋಪ ದೋಷಗಳಿಗೆ ಹೊರತಲ್ಲ. ಅಂತೆಯೇ ಇಲ್ಲೂ ದ್ವಿತೀಯಾರ್ಧ ಸ್ವಲ್ಪ ಸುದೀರ್ಘವೆನಿಸುತ್ತದೆ. ಆದರೆ ಎಲ್ಲರ ನಿರೀಕ್ಷೆ ಮೀರಿದ ರೀತಿಯಲ್ಲಿ ಕಥೆ ಸಾಗುವುದರಿಂದ ಅಲ್ಲಲ್ಲಿ ವಾವ್ ಫ್ಯಾಕ್ಟರ್ ಗಳಿದೆ. ಮತ್ತದು ಇಷ್ಟವಾಗುತ್ತೆ.
ಆದರೆ ರಾಜ್ ಬಿ ಶೆಟ್ಟಿ ಒಂದಷ್ಟು ಅದ್ಭುತ ಸಿನಿಮಾಗಳನ್ನು ಕೊಡಬಲ್ಲ ಕನಸು ಮತ್ತು ಕಸುವನ್ನು ಹೊಂದಿರುವ ನಿರ್ದೇಶಕ ಎಂಬುದು ಸತ್ಯ.

ಅವರ ಸಿನಿಮಾಪ್ರೀತಿಗೆ, ಬರಹಕ್ಕೆ ಎಂಥವರಾದರೂ ಅಭಿಮಾನಿಯಾಗುತ್ತಾರೆ.
ಕ್ಯಾಮೆರಾ ವರ್ಕ್, ಎಡಿಟಿಂಗ್ ಸಕತ್ತಾಗಿ ಬ್ಲೆಂಡ್ ಆಗಿದೆ.
ಮಿಥುನ್ ಮುಕುಂದನ್ ಅವರ ಹಿನ್ನೆಲೆ ಸಂಗೀತ ಬೇರೆಯದೇ ಫೀಲ್ ಕೊಡುತ್ತದೆ, ಕಾಡುತ್ತದೆ, ಆವರಿಸುತ್ತದೆ.
ಇಂಥದ್ದೊಂದು ಕಥೆ ನಂಬಿ ಹಣ ಹೂಡಿದ ನಿರ್ಮಾಪಕರಿಗೂ ಮೆಚ್ಚುಗೆ ಸಲ್ಲಲೇಬೇಕು.
ಮಲಯಾಳಂ, ತಮಿಳಿನ ಪ್ರಯೋಗಾತ್ಮಕ ಚಿತ್ರಗಳನ್ನು ಮೆಚ್ಚಿ ಹೊಗಳುವವರಿಗೆ ಈ ಚಿತ್ರ ಹೆಚ್ಚು ಆಪ್ತ ಎನಿಸುತ್ತದೆ. ಮತ್ತು ನಾವು ಈಗ ಪರಭಾಷಾ ನಿರ್ದೇಶಕರ ಅಭಿಮಾನಿಗಳಿಗೂ ಈ ಚಿತ್ರವನ್ನು ರೆಫರ್ ಮಾಡಬಹುದು. ಆ ಬಳಿಕ ಅವರು ಸಹ ರಾಜ್ ಅವರನ್ನು ಹೊಗಳುವುದನ್ನು ಕಂಡು ಸಂಭ್ರಮಿಸಬಹುದು.
ಒಮ್ಮೆ ನೋಡಿ, ಹೊಸತನಕ್ಕೆ ಬೆಂಬಲ ನೀಡಿ.
Good luck and congratulations for the tremendous success Raj B Shetty
ಧನ್ಯವಾದಗಳೊಂದಿಗೆ
ಟಿ.ಜಿ.ನಂದೀಶ್, ತೀರ್ಥಹಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.