ಉಪಯುಕ್ತ ಮಾಹಿತಿ

ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

65

ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.

ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.

ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್‌ ನೋಬ್‌ ಆಫ್‌ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.

ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ