ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.
ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.
ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್ ನೋಬ್ ಆಫ್ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.
ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…