ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ ವಿಚಿತ್ರವಾಗಿ ವರ್ತಿಸುವುದನ್ನು ನೋಡಿ ವೈದ್ಯಕೀಯ ತಪಾಸಣೆ ಮಾಡಿಸಿದಾಗ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಲಿಂಡಾ ಹೇಳಿದ್ದಾರೆ.
ಒಂದು ದಿನ ನಾನು ಸೋಫಾ ಮೇಲೆ ಸುಮ್ಮನೇ ಕುಳಿತಿದ್ದೆ. ಬಿಯಾ ನನ್ನ ಮೇಲೆ ಜಿಗಿದು ನನ್ನ ಎದೆ ಭಾಗವನ್ನು ಗುದ್ದು, ಮೂಗಿನಿಂದ ವಾಸನೆಯನ್ನು ಗ್ರಹಿಸುತ್ತಾ ವಿಚಿತ್ರವಾಗಿ ವರ್ತಿಸುತ್ತಿತ್ತು. ಇದಕ್ಕೂ ಮುಂಚೆ ಒಮ್ಮೆಯೂ ಈ ರೀತಿ ಮಾಡಿರಲಿಲ್ಲ. ಇದು ಬಹಳ ವಿಚಿತ್ರ ಎನಿಸಿತು. ಆ ಸಮಯದಲ್ಲಿ ಯೋಚಿಸದೇ ನಾನು ಸುಮ್ಮನಾದೆ ಎಂದು ತಿಳಿಸಿದ್ದಾರೆ.

ಸುಮಾರು ಎರಡು ತಿಂಗಳವರೆಗೂ ಇದೇ ರೀತಿ ಮಾಡುತ್ತಾ ವಿಚಿತ್ರವಾಗಿ ವರ್ತಿಸುತ್ತಿತ್ತು. ಇದರಿಂದ ಎದೆಯ ಒಂದು ಭಾಗದಲ್ಲಿ ಊತದ ಅನುಭವವಾಯಿತು. ಇದರಿಂದ ಎಚ್ಚೆತ್ತು ತಕ್ಷಣ ವೈದ್ಯರ ಬಳಿ ತೆರಳಿ ಪರೀಕ್ಷೆ ಮಾಡಿಸಿದೆ. ವೈದ್ಯರು ವಿಶ್ಲೇಷಿಸಿದ ಬಳಿಕ ಮ್ಯಾಮ್ಮೊಗ್ರಾಮ್(ಸ್ತನ ಕ್ಯಾನ್ಸರ್ ಆರಂಭಿಕ ಹಂತ) ಎಂದು ಖಚಿತಪಡಿಸಿದರು. ಇದು ವೇಗವಾಗಿ ಬೆಳೆದು ಸ್ತನ ಕ್ಯಾನ್ಸರ್ಗೆ ತಿರುಗುವುದಲ್ಲದೇ, ದುಗ್ಧರಸ ಗ್ರಂಥಿಗಳಿಗೂ ಹರಡುತ್ತಿತ್ತು ಎಂದು ಲಿಂಡಾ ವಿವರಿಸಿದ್ದಾರೆ.
ಪರೀಕ್ಷೆಗೆ ಒಳಗಾದ ಬಳಿಕ ಬಿಯಾ ಶ್ವಾನದಂತೆ ಅದರ ಮರಿ ಎನ್ಯಾ ಕೂಡ ವಿಚಿತ್ರವಾಗಿ ವರ್ತಿಸಲು ಶುರು ಮಾಡಿತು ಎಂದು ಮುಂಕ್ಲೆ ಹೇಳಿದ್ದಾರೆ.

ಸದ್ಯ ಲಿಂಡಾ ಅವರು ಚಿಕಿತ್ಸೆ ಪಡೆದುಕೊಂಡಿದ್ದು, ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ. ಮೂರನೇ ಕೆಮೊಥೆರಪಿ ಚಿಕಿತ್ಸೆ ವೇಳೆ ತಮ್ಮ ಶ್ವಾನಗಳು ವಿಚಿತ್ರವಾಗಿ ವರ್ತಿಸುವುದನ್ನು ನಿಲ್ಲಿಸಿದವು. ಈ ಬಗ್ಗೆ ವೈದ್ಯರಿಗೆ ತಿಳಿಸಿದಾಗ ಅವರು ಕೂಡ ಅಚ್ಚರಿಗೊಂಡು, ಧನ್ಯವಾದ ಹೇಳುವಂತೆ ತಿಳಿಸಿದರು. ಆದರೆ, ಶ್ವಾನಗಳಿಗೆ ಪದಗಳಲ್ಲಿ ಹೇಗೆ ಧನ್ಯವಾದ ತಿಳಿಸಬೇಕೆಂದು ಗೊತ್ತಾಗುತ್ತಿಲ್ಲ. ಆದರೆ, ನನ್ನ ಜೀವನವನ್ನು ಅವುಗಳಿಗಾಗಿ ಮುಡುಪಾಗಿಟ್ಟಿರುತ್ತೇನೆ ಎಂದು ಲಿಂಡಾ ಭಾವನಾತ್ಮಕವಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…