ಸುದ್ದಿ

ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

75

ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು. 
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್​ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್​ಲೋಡ್​ ಮಾಡಿದ್ದು ವೈರಲ್​ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್​ ಮಾಡ್ಕೊಂಡ್​ ಬಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಜ್ಯೋತಿಷ್ಯ

    ಆದಿಶಕ್ತಿ ದೇವಿಯ ಆಶೀರ್ವಾದದಿಂದ ಈ ರಾಶಿಗಳಿಗೆ ವಿಪರೀತ ಗಜಕೇಸರಿಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…