ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು.
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್ಬುಕ್ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್ಲೋಡ್ ಮಾಡಿದ್ದು ವೈರಲ್ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್ ಮಾಡ್ಕೊಂಡ್ ಬಿಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….