ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ಭವಿಷ್ಯ…………
ಮೇಷ ರಾಶಿ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು.
ವೃಷಭ ರಾಶಿ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡದೆ

ಮಿಥುನ ರಾಶಿ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ದಿಢೀರ್ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾವುದಕ್ಕೂ ಹಿಂದುಮುಂದು ಯೋಚಿಸಿ ಕಾರ್ಯಪ್ರವೃತ್ತರಾಗಿ.
ಕಟಕ ರಾಶಿ
ನಿಮ್ಮ ಹತ್ತಿರದ ಜನರು ವಿನಾಕಾರಣ ಜಗಳಗಳಿಗೆ ಮುಂದಾಗುವ ಸಂಭವವಿದೆ. ಬೇಸರಿಸಬೇಡಿ. ಜೀವನದ ಪ್ರತಿ ಘಟನೆಯು ನಿಮಗೆ ಉತ್ತಮ ಪಾಠ ನೀಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.
ಸಿಂಹ ರಾಶಿ
ನಿಮ್ಮ ಮಾತಿಗೆ ಬೆಲೆವುಂಟು ಎಂಬುದು ಒಳ್ಳೆಯದೇ. ಆದರೆ ಜನ ಒಂದೇ ರೀತಿಯಾಗಿ ಚಿಂತಿಸುವುದಿಲ್ಲ. ಹಾಗಾಗಿ ಮೇಲ್ನೋಟಕ್ಕೆ ನಿಮ್ಮಂತೆ ಇದ್ದರೂ ಅವರ ಒಳ ವಿಚಾರಧಾರೆಗಳು ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದೇ ಆಗಿರುತ್ತದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.

ಕನ್ಯಾ ರಾಶಿ
ಎಷ್ಟೇ ರೀತಿಯ ಜನರು ನಿಮ್ಮ ಮೇಲೆ ಪರಿಣಾಮ ಬೀರಿರಬಹುದು. ಆದರೆ ಇತ್ತೀಚೆಗೆ ಪರಿಚಯವಾದ ಗಣ್ಯರ ಮಾತು ನಿಮ್ಮ ಜನಜೀವನಕ್ಕೆ ಹತ್ತಿರವಾದಂತೆ ಎನಿಸುತ್ತಿರುವುದರಿಂದ ಅವರ ಬಗ್ಗೆ ಗೌರವ ಆದರಗಳು ಹೆಚ್ಚಾಗುವುವು. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು.
ತುಲಾ ರಾಶಿ
ನಿಮ್ಮ ಗುರಿಯನ್ನು ಬೆನ್ನುಹತ್ತಿ ಸೋತಿದ್ದೀರಿ ಎನ್ನುವ ಬಳಲಿಕೆ ಬೇಡ. ಮುನ್ನುಗ್ಗಿರಿ ಜಯಶೀಲರಾಗುವಿರಿ. ಪತ್ನಿಯ ಸಕಾಲಿಕ ಎಚ್ಚರಿಕೆ ಮಾತುಗಳನ್ನು ಆಲಿಸಿ ಮತ್ತು ಅದರಂತೆ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ,
ವೃಶ್ಚಿಕ ರಾಶಿ
ಬಹುರೂಪಿಯಾದ ಮತ್ತು ಅತ್ಯಂತ ಕರುಣಾಮಯಿಯಾದ ಭಗವಂತನ ಅನುಗ್ರಹ ನಿಮ್ಮ ಮೇಲಿರುವುದರಿಂದ ಹೆದರುವ ಅವಶ್ಯಕತೆಯಿಲ್ಲ. ನಿಮ್ಮ ಮನೆಗೆ ನೂತನ ಸದಸ್ಯನ ಸೇರ್ಪಡೆ ಸಾಧ್ಯತೆ ಇದೆ. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ.
ಧನಸ್ಸು ರಾಶಿ
ಯಾರು ಏನೇ ಅನ್ನಲಿ, ಬಿಡಲಿ ನಿಮ್ಮ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಇದು ನಿಮ್ಮನ್ನು ಇಚ್ಛಿತ ಗುರಿ ಎಡೆಗೆ ಕರೆದುಕೊಂಡು ಹೋಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿನ ಪ್ರಗತಿ ನಿಮಗೆ ಸಂತಸ ನೀಡುವುದು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು.

ಮಕರ ರಾಶಿ
ಹಳೆಯ ವ್ಯಾಜ್ಯಗಳು ನಿಮ್ಮನ್ನು ಬಳಲಿಸುತ್ತವೆ. ಶಾಂತಿಯಿಂದ ಇರಿ. ಮಾತು ಮಾತಿಗೂ ಆಣೆ ಪ್ರಮಾಣಗಳನ್ನು ಮಾಡದಿರಿ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೂ ಹೋಯಿತು ಎನ್ನುವಂತೆ ಮೌನ ಧರಿಸಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಬಾಸ್ನಿಂದ ಪ್ರಶಂಸೆ ಪಡೆಯುವ ಅವಕಾಶ ಅಧಿಕವಾಗಿದೆ. ಮುಂದಿನ ಪದೋನ್ನತಿಗೆ ದಾರಿ ನಿರಾಳವಾಗುವುದು. ನಿಮ್ಮ ಕಾಯಕದಲ್ಲಿ ನಿಷ್ಠೆ ತೋರಿ. ಭಗವಂತನ ಆಶೀರ್ವಾದ ನಿಮ್ಮ ಮೇಲೆ ಇರುವುದು. ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು.
ಮೀನ ರಾಶಿ
ಹಿರಿಯರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ. ಅತಿ ಸೂಕ್ಷ್ಮಮತಿಗಳಾದ ನಿಮಗೆ ಕೆಲವು ವಿಚಾರಗಳನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಅಂತೆಯೇ ಒಂದು ಪ್ರಸಂಗವು ನಿಮ್ಮ ಚಿತ್ತ ಕ್ಷೋಭೆಯನ್ನು ಕದಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…