ಸುದ್ದಿ

ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

40

ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

    ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…