ಉಪಯುಕ್ತ ಮಾಹಿತಿ, ದೇವರು

ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

294

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.

ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.

ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.

ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.

ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.

ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.

ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.