ಉಪಯುಕ್ತ ಮಾಹಿತಿ, ದೇವರು

ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

294

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.

ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.

ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.

ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.

ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.

ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.

ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…