ಉಪಯುಕ್ತ ಮಾಹಿತಿ, ದೇವರು

ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

287

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.

ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.

ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.

ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.

ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.

ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.

ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ಸ್ಪೂರ್ತಿ

    ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

    ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…

  • ಸುದ್ದಿ

    ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

    ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…  

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.