ಉಪಯುಕ್ತ ಮಾಹಿತಿ, ದೇವರು

ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

301

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.

ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.

ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.

ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.

ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.

ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.

ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್

    ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…