News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ದೇವರು

ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

305

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.

ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.

ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.

ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.

ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.

ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.

ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….