News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ, ದೇವರು

ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

303

ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.

ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.

ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.

ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.

ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.

ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.

ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…