ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.
ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.
ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…