News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

87

15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ.

ನಾವು ಈ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದ್ದರು ಕೂಡ ಶೌಚಾಲಯಗಳಿಗೆ ನೀರು ಕೊಡಬೇಕಾಗುತ್ತದೆ. ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೆ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು.

 ಅದು ನೇತ್ರಾವತಿ ಕಿಂಡಿ ಅಣೆಕಟ್ಟಿನಲ್ಲಿ ತಾತ್ಕಾಲಿಕ ನೀರು ಹಾಗೂ ತೀರ್ಥದ ಗುಂಡಿಯಲ್ಲಿ ಸ್ವಲ್ಪ ನೀರಿದೆ. ಮುಂದೆ ಮಳೆ ಬರದಿದ್ದರೆ ಮಂಜುನಾಥನಿಗೂ ಬರದ ಬಿಸಿ ತಟ್ಟಲಿದೆ. ಅಲ್ಲಿನ ತೀರ್ಥ ಗುಂಡಿಯಲ್ಲೂ ನಾಲ್ಕು ಅಡಿ ನೀರು ಕಡಿಮೆ ಆಗಿದೆ. ಹಿಂದೆಯೂ ಈ ರೀತಿ ಆಗಿದೆ. ಆದರೆ ಇಷ್ಟು ತೀವ್ರವಾಗಿ ಆಗಿರಲಿಲ್ಲ. ಉಪನದಿಗಳಲ್ಲಿ ನೀರು ಬತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ಆಗಿದೆ. ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಆಗಿದೆ ಎಂದು ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…