ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ ಹೇಳಿದ್ದವು ಆದರೆ ಸದ್ಯಕ್ಕೆ ಸರ್ಕಾರ ಈ ಸುದ್ದಿಯನ್ನು ತಳ್ಳಿ ಹಾಕಿದೆ. ಹೌದು ದೇಶ ಹಿಂದೆಂದೂ ಕಂಡಿರದ ಅದ್ಬುತ ಯಶಸ್ಸೊಂದನ್ನು ಪತ್ತೆಹಚ್ಚುವಲ್ಲಿ ವಿಜ್ಞಾನಿಗಳು ಯಶಸ್ಸನ್ನು ಪಡೆದಿರುವುದು ನಿಜ. ಆದರೆ ನಿಜಕ್ಕೂ ಈ ಸ್ಥಳದಲ್ಲಿ ಅಷ್ಟೊಂದು ಪ್ರಮಾಣದ ಚಿನ್ನದ ಗಣಿ ಇದೆಯಾ ಇದರ ಬಗ್ಗೆ ವಿಜ್ಞಾನಿಗಳು ಹೇಳಿದ್ದೇನು ನೋಡೋಣ.

ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ಮತ್ತು ಉತ್ತರ ಪ್ರದೇಶ ಭೂವಿಜ್ಞಾನ ಮತ್ತು ಗಣಿಗಾರಿಕೆ ನಿರ್ದೇಶನಾಲಯವು ಉತ್ತರಪ್ರದೆಶದಲ್ಲಿನ ಸೋನ್ಭದ್ರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳನ್ನು ಕಂಡುಹಿಡಿದಿದೆ. ವರದಿಗಳ ಪ್ರಕಾರ, ಚಿನ್ನದ ನಿಕ್ಷೇಪಗಳು ಸೋನ್ಪಹಡಿ ಮತ್ತು ಹಾರ್ಡಿ ಕ್ಷೇತ್ರ ಎಂಬ ಎರಡು ಸ್ಥಳಗಳಲ್ಲಿ ಕಂಡುಬಂದಿವೆ. ಆದರೆ ಈ ಪ್ರದೇಶದಲ್ಲಿ ಟನ್ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಈಗ ತಳ್ಳಿ ಹಾಕಿದ್ದಾರೆ. ನಮಗೆ ಸಿಕ್ಕಿರುವ ಅಂದಾಜಿನ ಪ್ರಕಾರ 160 ಕೆಜಿ ಚಿನ್ನವನ್ನಷ್ಟೇ ತೆಗೆಯಬಹುದಾಗಿದೆ. ಒಟ್ಟಾರೆ 56000 ಟನ್ ಚಿನ್ನದ ಅದಿರು ದೊರಕಬಹುದು ಅಷ್ಟೇ ಅದರಿಂದ ಶುದ್ದೀಕರಣ ಆದ ಬಳಿಕ ಏನಿಲ್ಲವೆಂದರೂ 160 ಕೆಜಿ ಚಿನ್ನ ಸಿಗಬಹುದು ಎಂದಿದ್ದಾರೆ.

ಉತ್ತರ ಪ್ರದೇಶದ ಸೋನ್ಭದ್ರದಲ್ಲಿ ಸುಮಾರು 3,350 ಟನ್ ಚಿನ್ನದ ಠೇವಣಿ ಪತ್ತೆಯಾಗಿಲ್ಲ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ಶನಿವಾರ ತಿಳಿಸಿದೆ ಎಂದು ಸ್ಥಳೀಯ ಗಣಿಗಾರಿಕೆ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ನಮ್ಮ ಹುಡುಕಾಟದ ಸಮಯದಲ್ಲಿ, ನಾವು 120 ಮೀಟರ್ ಮತ್ತು 50 ಮೀಟರ್ ಆಳದ ಕಂದಕವನ್ನು ಹೊಂದಿರುವ ಬಾವಿಗಳನ್ನು ಅಗೆದಿದ್ದೇವೆ. ನಮ್ಮ ವರದಿಯಲ್ಲಿ, ನಾವು ಆಳವಾಗಿ ಹೋದರೆ ಮತ್ತು ಬಾವಿಗಳನ್ನು ಹತ್ತಿರಕ್ಕೆ ಅಗೆದರೆ (120 ಮೀ ಗಿಂತ ಕಡಿಮೆ) ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಚಿನ್ನವನ್ನು ಕಂಡುಹಿಡಿಯುವ ಸಾಧ್ಯತೆಯಿದೆ ಎಂದು ನಾವು ಸೂಚಿಸಿದ್ದೇವೆ. ಆದರೆ ಖಂಡಿತವಾಗಿಯೂ 3,350 ಟನ್ ಅಲ್ಲ ” ವಿಜ್ಞಾನಿ ಓರ್ವರು ತಿಳಿಸಿದ್ದಾರೆ.

ಸದ್ಯಕ್ಕೆ ಏಳು ಸದಸ್ಯರ ತಂಡವೊಂದು ಈ ಜಾಗದಲ್ಲಿ ಇನ್ನು ಅಧ್ಯಯನ ನಡೆಸುತ್ತಿದೆ. ಚಿನ್ನದ ಹೊರತಾಗಿ, ಈ ಪ್ರದೇಶದಲ್ಲಿ ಯುರೇನಿಯಂನಂತಹ ಅಪರೂಪದ ಖನಿಜಗಳ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಉತ್ತರಪ್ರದೇಶದ ಬುಂದೇಲ್ಖಂಡ್ ಮತ್ತು ವಿಂಧ್ಯಾನ್ ಜಿಲ್ಲೆಗಳಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಸುಣ್ಣದ ಕಲ್ಲು, ಗ್ರಾನೈಟ್, ಫಾಸ್ಫೇಟ್, ಸ್ಫಟಿಕ ಶಿಲೆ ಮತ್ತು ಚೀನಾ ಜೇಡಿಮಣ್ಣಿನಂತಹ ಖನಿಜಗಳಿವೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಚಿನ್ನದ ರಾಶಿ ರಾಶಿ ಗಣಿಯೆ ಸಿಕ್ಕರೆ ಭಾರತ ಮತ್ತಷ್ಟು ಸೂಪರ್ ಪವರ್ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….