ಸುದ್ದಿ

ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

314

ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ ಹೇಳಿದ್ದವು ಆದರೆ ಸದ್ಯಕ್ಕೆ ಸರ್ಕಾರ ಈ ಸುದ್ದಿಯನ್ನು ತಳ್ಳಿ ಹಾಕಿದೆ. ಹೌದು ದೇಶ ಹಿಂದೆಂದೂ ಕಂಡಿರದ ಅದ್ಬುತ ಯಶಸ್ಸೊಂದನ್ನು ಪತ್ತೆಹಚ್ಚುವಲ್ಲಿ ವಿಜ್ಞಾನಿಗಳು ಯಶಸ್ಸನ್ನು ಪಡೆದಿರುವುದು ನಿಜ. ಆದರೆ ನಿಜಕ್ಕೂ ಈ ಸ್ಥಳದಲ್ಲಿ ಅಷ್ಟೊಂದು ಪ್ರಮಾಣದ ಚಿನ್ನದ ಗಣಿ ಇದೆಯಾ ಇದರ ಬಗ್ಗೆ ವಿಜ್ಞಾನಿಗಳು ಹೇಳಿದ್ದೇನು ನೋಡೋಣ.

ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ಉತ್ತರ ಪ್ರದೇಶ ಭೂವಿಜ್ಞಾನ ಮತ್ತು ಗಣಿಗಾರಿಕೆ ನಿರ್ದೇಶನಾಲಯವು ಉತ್ತರಪ್ರದೆಶದಲ್ಲಿನ ಸೋನ್‌ಭದ್ರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳನ್ನು ಕಂಡುಹಿಡಿದಿದೆ. ವರದಿಗಳ ಪ್ರಕಾರ, ಚಿನ್ನದ ನಿಕ್ಷೇಪಗಳು ಸೋನ್‌ಪಹಡಿ ಮತ್ತು ಹಾರ್ಡಿ ಕ್ಷೇತ್ರ ಎಂಬ ಎರಡು ಸ್ಥಳಗಳಲ್ಲಿ ಕಂಡುಬಂದಿವೆ. ಆದರೆ ಈ ಪ್ರದೇಶದಲ್ಲಿ ಟನ್ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಈಗ ತಳ್ಳಿ ಹಾಕಿದ್ದಾರೆ. ನಮಗೆ ಸಿಕ್ಕಿರುವ ಅಂದಾಜಿನ ಪ್ರಕಾರ 160 ಕೆಜಿ ಚಿನ್ನವನ್ನಷ್ಟೇ ತೆಗೆಯಬಹುದಾಗಿದೆ. ಒಟ್ಟಾರೆ 56000 ಟನ್ ಚಿನ್ನದ ಅದಿರು ದೊರಕಬಹುದು ಅಷ್ಟೇ ಅದರಿಂದ ಶುದ್ದೀಕರಣ ಆದ ಬಳಿಕ ಏನಿಲ್ಲವೆಂದರೂ 160 ಕೆಜಿ ಚಿನ್ನ ಸಿಗಬಹುದು ಎಂದಿದ್ದಾರೆ.

ಉತ್ತರ ಪ್ರದೇಶದ ಸೋನ್‌ಭದ್ರದಲ್ಲಿ ಸುಮಾರು 3,350 ಟನ್ ಚಿನ್ನದ ಠೇವಣಿ ಪತ್ತೆಯಾಗಿಲ್ಲ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಶನಿವಾರ ತಿಳಿಸಿದೆ ಎಂದು ಸ್ಥಳೀಯ ಗಣಿಗಾರಿಕೆ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ನಮ್ಮ ಹುಡುಕಾಟದ ಸಮಯದಲ್ಲಿ, ನಾವು 120 ಮೀಟರ್ ಮತ್ತು 50 ಮೀಟರ್ ಆಳದ ಕಂದಕವನ್ನು ಹೊಂದಿರುವ ಬಾವಿಗಳನ್ನು ಅಗೆದಿದ್ದೇವೆ. ನಮ್ಮ ವರದಿಯಲ್ಲಿ, ನಾವು ಆಳವಾಗಿ ಹೋದರೆ ಮತ್ತು ಬಾವಿಗಳನ್ನು ಹತ್ತಿರಕ್ಕೆ ಅಗೆದರೆ (120 ಮೀ ಗಿಂತ ಕಡಿಮೆ) ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಚಿನ್ನವನ್ನು ಕಂಡುಹಿಡಿಯುವ ಸಾಧ್ಯತೆಯಿದೆ ಎಂದು ನಾವು ಸೂಚಿಸಿದ್ದೇವೆ. ಆದರೆ ಖಂಡಿತವಾಗಿಯೂ 3,350 ಟನ್ ಅಲ್ಲ ” ವಿಜ್ಞಾನಿ ಓರ್ವರು ತಿಳಿಸಿದ್ದಾರೆ.

ಸದ್ಯಕ್ಕೆ ಏಳು ಸದಸ್ಯರ ತಂಡವೊಂದು ಈ ಜಾಗದಲ್ಲಿ ಇನ್ನು ಅಧ್ಯಯನ ನಡೆಸುತ್ತಿದೆ. ಚಿನ್ನದ ಹೊರತಾಗಿ, ಈ ಪ್ರದೇಶದಲ್ಲಿ ಯುರೇನಿಯಂನಂತಹ ಅಪರೂಪದ ಖನಿಜಗಳ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಉತ್ತರಪ್ರದೇಶದ ಬುಂದೇಲ್‌ಖಂಡ್ ಮತ್ತು ವಿಂಧ್ಯಾನ್ ಜಿಲ್ಲೆಗಳಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಸುಣ್ಣದ ಕಲ್ಲು, ಗ್ರಾನೈಟ್, ಫಾಸ್ಫೇಟ್, ಸ್ಫಟಿಕ ಶಿಲೆ ಮತ್ತು ಚೀನಾ ಜೇಡಿಮಣ್ಣಿನಂತಹ ಖನಿಜಗಳಿವೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಚಿನ್ನದ ರಾಶಿ ರಾಶಿ ಗಣಿಯೆ ಸಿಕ್ಕರೆ ಭಾರತ ಮತ್ತಷ್ಟು ಸೂಪರ್ ಪವರ್ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…