ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ ಹೇಳಿದ್ದವು ಆದರೆ ಸದ್ಯಕ್ಕೆ ಸರ್ಕಾರ ಈ ಸುದ್ದಿಯನ್ನು ತಳ್ಳಿ ಹಾಕಿದೆ. ಹೌದು ದೇಶ ಹಿಂದೆಂದೂ ಕಂಡಿರದ ಅದ್ಬುತ ಯಶಸ್ಸೊಂದನ್ನು ಪತ್ತೆಹಚ್ಚುವಲ್ಲಿ ವಿಜ್ಞಾನಿಗಳು ಯಶಸ್ಸನ್ನು ಪಡೆದಿರುವುದು ನಿಜ. ಆದರೆ ನಿಜಕ್ಕೂ ಈ ಸ್ಥಳದಲ್ಲಿ ಅಷ್ಟೊಂದು ಪ್ರಮಾಣದ ಚಿನ್ನದ ಗಣಿ ಇದೆಯಾ ಇದರ ಬಗ್ಗೆ ವಿಜ್ಞಾನಿಗಳು ಹೇಳಿದ್ದೇನು ನೋಡೋಣ.

ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ಮತ್ತು ಉತ್ತರ ಪ್ರದೇಶ ಭೂವಿಜ್ಞಾನ ಮತ್ತು ಗಣಿಗಾರಿಕೆ ನಿರ್ದೇಶನಾಲಯವು ಉತ್ತರಪ್ರದೆಶದಲ್ಲಿನ ಸೋನ್ಭದ್ರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳನ್ನು ಕಂಡುಹಿಡಿದಿದೆ. ವರದಿಗಳ ಪ್ರಕಾರ, ಚಿನ್ನದ ನಿಕ್ಷೇಪಗಳು ಸೋನ್ಪಹಡಿ ಮತ್ತು ಹಾರ್ಡಿ ಕ್ಷೇತ್ರ ಎಂಬ ಎರಡು ಸ್ಥಳಗಳಲ್ಲಿ ಕಂಡುಬಂದಿವೆ. ಆದರೆ ಈ ಪ್ರದೇಶದಲ್ಲಿ ಟನ್ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಈಗ ತಳ್ಳಿ ಹಾಕಿದ್ದಾರೆ. ನಮಗೆ ಸಿಕ್ಕಿರುವ ಅಂದಾಜಿನ ಪ್ರಕಾರ 160 ಕೆಜಿ ಚಿನ್ನವನ್ನಷ್ಟೇ ತೆಗೆಯಬಹುದಾಗಿದೆ. ಒಟ್ಟಾರೆ 56000 ಟನ್ ಚಿನ್ನದ ಅದಿರು ದೊರಕಬಹುದು ಅಷ್ಟೇ ಅದರಿಂದ ಶುದ್ದೀಕರಣ ಆದ ಬಳಿಕ ಏನಿಲ್ಲವೆಂದರೂ 160 ಕೆಜಿ ಚಿನ್ನ ಸಿಗಬಹುದು ಎಂದಿದ್ದಾರೆ.

ಉತ್ತರ ಪ್ರದೇಶದ ಸೋನ್ಭದ್ರದಲ್ಲಿ ಸುಮಾರು 3,350 ಟನ್ ಚಿನ್ನದ ಠೇವಣಿ ಪತ್ತೆಯಾಗಿಲ್ಲ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ಶನಿವಾರ ತಿಳಿಸಿದೆ ಎಂದು ಸ್ಥಳೀಯ ಗಣಿಗಾರಿಕೆ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ನಮ್ಮ ಹುಡುಕಾಟದ ಸಮಯದಲ್ಲಿ, ನಾವು 120 ಮೀಟರ್ ಮತ್ತು 50 ಮೀಟರ್ ಆಳದ ಕಂದಕವನ್ನು ಹೊಂದಿರುವ ಬಾವಿಗಳನ್ನು ಅಗೆದಿದ್ದೇವೆ. ನಮ್ಮ ವರದಿಯಲ್ಲಿ, ನಾವು ಆಳವಾಗಿ ಹೋದರೆ ಮತ್ತು ಬಾವಿಗಳನ್ನು ಹತ್ತಿರಕ್ಕೆ ಅಗೆದರೆ (120 ಮೀ ಗಿಂತ ಕಡಿಮೆ) ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಚಿನ್ನವನ್ನು ಕಂಡುಹಿಡಿಯುವ ಸಾಧ್ಯತೆಯಿದೆ ಎಂದು ನಾವು ಸೂಚಿಸಿದ್ದೇವೆ. ಆದರೆ ಖಂಡಿತವಾಗಿಯೂ 3,350 ಟನ್ ಅಲ್ಲ ” ವಿಜ್ಞಾನಿ ಓರ್ವರು ತಿಳಿಸಿದ್ದಾರೆ.

ಸದ್ಯಕ್ಕೆ ಏಳು ಸದಸ್ಯರ ತಂಡವೊಂದು ಈ ಜಾಗದಲ್ಲಿ ಇನ್ನು ಅಧ್ಯಯನ ನಡೆಸುತ್ತಿದೆ. ಚಿನ್ನದ ಹೊರತಾಗಿ, ಈ ಪ್ರದೇಶದಲ್ಲಿ ಯುರೇನಿಯಂನಂತಹ ಅಪರೂಪದ ಖನಿಜಗಳ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಉತ್ತರಪ್ರದೇಶದ ಬುಂದೇಲ್ಖಂಡ್ ಮತ್ತು ವಿಂಧ್ಯಾನ್ ಜಿಲ್ಲೆಗಳಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಸುಣ್ಣದ ಕಲ್ಲು, ಗ್ರಾನೈಟ್, ಫಾಸ್ಫೇಟ್, ಸ್ಫಟಿಕ ಶಿಲೆ ಮತ್ತು ಚೀನಾ ಜೇಡಿಮಣ್ಣಿನಂತಹ ಖನಿಜಗಳಿವೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಚಿನ್ನದ ರಾಶಿ ರಾಶಿ ಗಣಿಯೆ ಸಿಕ್ಕರೆ ಭಾರತ ಮತ್ತಷ್ಟು ಸೂಪರ್ ಪವರ್ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…