ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ ಹೇಳಿದ್ದವು ಆದರೆ ಸದ್ಯಕ್ಕೆ ಸರ್ಕಾರ ಈ ಸುದ್ದಿಯನ್ನು ತಳ್ಳಿ ಹಾಕಿದೆ. ಹೌದು ದೇಶ ಹಿಂದೆಂದೂ ಕಂಡಿರದ ಅದ್ಬುತ ಯಶಸ್ಸೊಂದನ್ನು ಪತ್ತೆಹಚ್ಚುವಲ್ಲಿ ವಿಜ್ಞಾನಿಗಳು ಯಶಸ್ಸನ್ನು ಪಡೆದಿರುವುದು ನಿಜ. ಆದರೆ ನಿಜಕ್ಕೂ ಈ ಸ್ಥಳದಲ್ಲಿ ಅಷ್ಟೊಂದು ಪ್ರಮಾಣದ ಚಿನ್ನದ ಗಣಿ ಇದೆಯಾ ಇದರ ಬಗ್ಗೆ ವಿಜ್ಞಾನಿಗಳು ಹೇಳಿದ್ದೇನು ನೋಡೋಣ.

ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ಮತ್ತು ಉತ್ತರ ಪ್ರದೇಶ ಭೂವಿಜ್ಞಾನ ಮತ್ತು ಗಣಿಗಾರಿಕೆ ನಿರ್ದೇಶನಾಲಯವು ಉತ್ತರಪ್ರದೆಶದಲ್ಲಿನ ಸೋನ್ಭದ್ರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳನ್ನು ಕಂಡುಹಿಡಿದಿದೆ. ವರದಿಗಳ ಪ್ರಕಾರ, ಚಿನ್ನದ ನಿಕ್ಷೇಪಗಳು ಸೋನ್ಪಹಡಿ ಮತ್ತು ಹಾರ್ಡಿ ಕ್ಷೇತ್ರ ಎಂಬ ಎರಡು ಸ್ಥಳಗಳಲ್ಲಿ ಕಂಡುಬಂದಿವೆ. ಆದರೆ ಈ ಪ್ರದೇಶದಲ್ಲಿ ಟನ್ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಈಗ ತಳ್ಳಿ ಹಾಕಿದ್ದಾರೆ. ನಮಗೆ ಸಿಕ್ಕಿರುವ ಅಂದಾಜಿನ ಪ್ರಕಾರ 160 ಕೆಜಿ ಚಿನ್ನವನ್ನಷ್ಟೇ ತೆಗೆಯಬಹುದಾಗಿದೆ. ಒಟ್ಟಾರೆ 56000 ಟನ್ ಚಿನ್ನದ ಅದಿರು ದೊರಕಬಹುದು ಅಷ್ಟೇ ಅದರಿಂದ ಶುದ್ದೀಕರಣ ಆದ ಬಳಿಕ ಏನಿಲ್ಲವೆಂದರೂ 160 ಕೆಜಿ ಚಿನ್ನ ಸಿಗಬಹುದು ಎಂದಿದ್ದಾರೆ.

ಉತ್ತರ ಪ್ರದೇಶದ ಸೋನ್ಭದ್ರದಲ್ಲಿ ಸುಮಾರು 3,350 ಟನ್ ಚಿನ್ನದ ಠೇವಣಿ ಪತ್ತೆಯಾಗಿಲ್ಲ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ಶನಿವಾರ ತಿಳಿಸಿದೆ ಎಂದು ಸ್ಥಳೀಯ ಗಣಿಗಾರಿಕೆ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ನಮ್ಮ ಹುಡುಕಾಟದ ಸಮಯದಲ್ಲಿ, ನಾವು 120 ಮೀಟರ್ ಮತ್ತು 50 ಮೀಟರ್ ಆಳದ ಕಂದಕವನ್ನು ಹೊಂದಿರುವ ಬಾವಿಗಳನ್ನು ಅಗೆದಿದ್ದೇವೆ. ನಮ್ಮ ವರದಿಯಲ್ಲಿ, ನಾವು ಆಳವಾಗಿ ಹೋದರೆ ಮತ್ತು ಬಾವಿಗಳನ್ನು ಹತ್ತಿರಕ್ಕೆ ಅಗೆದರೆ (120 ಮೀ ಗಿಂತ ಕಡಿಮೆ) ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಚಿನ್ನವನ್ನು ಕಂಡುಹಿಡಿಯುವ ಸಾಧ್ಯತೆಯಿದೆ ಎಂದು ನಾವು ಸೂಚಿಸಿದ್ದೇವೆ. ಆದರೆ ಖಂಡಿತವಾಗಿಯೂ 3,350 ಟನ್ ಅಲ್ಲ ” ವಿಜ್ಞಾನಿ ಓರ್ವರು ತಿಳಿಸಿದ್ದಾರೆ.

ಸದ್ಯಕ್ಕೆ ಏಳು ಸದಸ್ಯರ ತಂಡವೊಂದು ಈ ಜಾಗದಲ್ಲಿ ಇನ್ನು ಅಧ್ಯಯನ ನಡೆಸುತ್ತಿದೆ. ಚಿನ್ನದ ಹೊರತಾಗಿ, ಈ ಪ್ರದೇಶದಲ್ಲಿ ಯುರೇನಿಯಂನಂತಹ ಅಪರೂಪದ ಖನಿಜಗಳ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಉತ್ತರಪ್ರದೇಶದ ಬುಂದೇಲ್ಖಂಡ್ ಮತ್ತು ವಿಂಧ್ಯಾನ್ ಜಿಲ್ಲೆಗಳಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಸುಣ್ಣದ ಕಲ್ಲು, ಗ್ರಾನೈಟ್, ಫಾಸ್ಫೇಟ್, ಸ್ಫಟಿಕ ಶಿಲೆ ಮತ್ತು ಚೀನಾ ಜೇಡಿಮಣ್ಣಿನಂತಹ ಖನಿಜಗಳಿವೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಚಿನ್ನದ ರಾಶಿ ರಾಶಿ ಗಣಿಯೆ ಸಿಕ್ಕರೆ ಭಾರತ ಮತ್ತಷ್ಟು ಸೂಪರ್ ಪವರ್ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…