ಸುದ್ದಿ

ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

73

ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್‌ ಟು ಫೇಸ್‌ ವಿಡಿಯೊ ಕಾಲಿಂಗ್‌ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್‌ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್‌ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್‌ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್‌ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್‌ ನೂತನ ಫೀಚರ್ಸ್‌ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್‌ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್‌ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್‌ ಮೋಡ್‌ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್‌ ಡಾಟಾ ಉಳಿಸಿಬಹುದು. ಸೆಟ್ಟಿಂಗ್‌ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್‌ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್‌ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್‌ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್‌ ಕಾಲಿಂಗ್ ಫೀಚರ್‌ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್‌ ಕನೆಕ್ಟ್‌ ಮಾಡಬಹುದಾಗಿದೆ. ಗ್ರೂಪ್‌ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್‌ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್‌ ಎರಡು ಮಹತ್ತರ ಫೀಚರ್ಸ್‌ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್‌ ಮತ್ತು ಮೆಸೆಜ್‌ಗೆ ಸುರಕ್ಷತೆ ಒಸಗಿಸಲು ಎಂಡ್‌ ಟು ಎಂಡ್‌ ಎನ್‌ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್‌ ಕಾಲಿಂಗ್‌ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್‌ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್‌ ಡಾಟಾ ಮತ್ತು ವೈಫೈ ನೆಟವರ್ಕ್‌ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್‌ ಆಯ್ಕೆ ದೊರೆಯಲಿದೆ.
ಫೀಚರ್ಸ್‌ ಸೇರ್ಪಡೆ ಗೂಗಲ್‌ನ ಎರಡು ಹೊಸ ಫೀಚರ್ಸ್‌ಗಳು ಭಾರತದ ಅಂಡ್ರಾಯ್ಡ್‌ ಓಎಸ್‌ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್‌ ಮಾದರಿಯ ಓಎಸ್‌ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್‌ಡೇಟ್‌ ವರ್ಷನ್‌ನಲ್ಲಿ ಈ ಫೀಚರ್ಸ್‌ಗಳು ಸೇರಿಕೊಳ್ಳಲಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…