ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ.

ಹೌದು ಇಡಿ ಜಗತ್ತನ್ನು ತನ್ನ ಮಾಯೆಯೊಳಗೆ ಸೆಳೆದ ಗೂಗಲ್ ಸರ್ಚ್ ಇಂಜಿನ್ ಗೆ ಇಂದು 21 ನೇ ಜನ್ಮದಿನ.
1998 ಸಪ್ಟೆಂಬರ್ ನಲ್ಲಿ ಸ್ಟ್ಯಾಂಡ್ ಪೋರ್ಡ್ ವಿಶ್ವವಿದ್ಯಾಲಯದಲ್ಲಿ ಗೂಗಲ್ ಕಾರ್ಯಾರಂಭ ಮಾಡಿತ್ತು. ಸಪ್ಟೆಂಬರ್ ೭ ರಂದು ರಜಿಸ್ಟರ್ ಆಗಿದ್ದರೂ ಕಾರ್ಯಾರಂಭ ಮಾಡಿದ್ದು ಸಪ್ಟೆಂಬರ್ 27 ರಂದು. ಹೀಗಾಗಿ ಇಂದಿಗೆ ಗೂಗಲ್ ಪ್ರಪಂಚಕ್ಕೆ ಪರಿಚಯವಾಗಿ ಬರೋಬ್ಬರಿ 21 ವರ್ಷಗಳು ಕಳೆದಿವೆ.

ಸ್ಟ್ಯಾಂಡ್ ಪೋರ್ಡ್ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾದ ಲ್ಯಾರಿ ಪೇಜ್ ಮತ್ತು ಸೆರ್ಗೆ ಬಿನ್ ಇದರ ಜನಕರು.ಲ್ಯಾರಿ ಪೇಜ್ ಮತ್ತು ಸೆರ್ಗೆ ಬಿನ್ ಇದನ್ನು ಗೂಗಲ್ ಎಂದು ಹೆಸರಿಟ್ಟರು. ಗೂಗೊಲ್ (google) ಅನ್ನೋದು ಇದರ ಮೂಲ ಪದ.

ಗೂಗಲ್ ಗೂ ಮುನ್ನ ಜನರು ಯಾಹೂ,ಆಸ್ಕ್ ಜೀವ್ಸ್ ಮತ್ತು ಬಿಂಗ್ ಸರ್ಚ್ ಇಂಜೀನ್ ಅವಲಂಬಿಸಿದ್ದರು.ಗೂಗಲ್ ಕಾರ್ಯಾರಂಭ ಮಾಡುತ್ತಿದ್ದಂತೆ ಈ ಸರ್ಚ್ ಇಂಜಿನ್ ಗಳಿಗೆ ಸ್ಪರ್ಧೆಯೊಡ್ಡಿತ್ತು. ಈಗ ಗೂಗಲ್ ವಿಶ್ವದ ಮುಂಚೂಣಿ ಸರ್ಚ್ ಇಂಜೀನ್ ಆಗಿದ್ದು ಅಂದಾಜು 100 ಭಾಷೆಗಳಲ್ಲಿ ಇದು ಕೆಲಸ ನಿರ್ವಹಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…